Advertisement

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

01:05 PM Mar 19, 2024 | Team Udayavani |

ಹುಬ್ಬಳ್ಳಿ: ಆಟೋ ರಿಕ್ಷಾ ಹಾಗೂ ಕಂಟೇನರ್ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ.

Advertisement

ಅಪಘಾತದಲ್ಲಿ ಚನ್ನಾಪುರ ಗ್ರಾಮದ ಈಶ್ವರ ನಡೂರ (45) ಮೃತಪಟ್ಟಿದ್ದು, ಅರ್ಜುನ ಬಂಡಿವಾಡ, ಯಲ್ಲಪ್ಪ ಬಂಡಿವಾಡ, ಬಸವರಾಜ, ನಾಗಪ್ಪ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚನ್ನಾಪುರ ಗ್ರಾಮದಿಂದ ಆರು ಜನರು ಆಟೋ ರಿಕ್ಷಾದಲ್ಲಿ ಶಿಶುನಾಳ ಶರೀಫರ ಜಾತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next