Advertisement

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

11:54 AM Oct 06, 2024 | Team Udayavani |

ಬೆಂಗಳೂರು: ಹಿಂದಿನಿಂದ ಅತೀವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ರಾಜಗೋಪಾಲನಗರ ನಿವಾಸಿ ಶೇಷಾದ್ರಿ (23) ಮೃತ ಬೈಕ್‌ ಸವಾರ.

ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ದಾಸರಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದಿದೆ. ಕೂಲಿ ಕಾರ್ಮಿಕನಾಗಿರುವ ಶೇಷಾದ್ರಿ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಯಶವಂತಪುರ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ. ಅದೇ ವೇಳೆ ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ದಾಸರಹಳ್ಳಿಯ ಮೆಟ್ರೋ ನಿಲ್ದಾಣ ಸಮೀಪದಲ್ಲಿ ಹಿಂದಿನಿಂದ ಶೇಷಾದ್ರಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಶೇಷಾದ್ರಿ ಮೇಲೆಯೇ ಲಾರಿ ಚಕ್ರಗಳು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಜಪ್ತಿ ಮಾಡಲಾಗಿದೆ. ಚಾಲಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next