ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನ ಮಯೂರಾ ಹೊಟೇಲ್ ಬಳಿಯ ಜಂಕ್ಷನ್ನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಬಾಗಲಕೋಟೆ – ಬಾದಾಮಿ ಮೂಲದ ಲಕ್ಷ್ಮಣ ಪೂಜಾರ್ (32) ಗಾಯಾಳು.
ರವಿವಾರ ಬೆಳಗ್ಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿನ ಚಾಲಕ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ನಿಂತಿದ್ದ ಲಕ್ಷ್ಮಣ್ ಪೂಜಾರ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಅವರ ತಲೆಗೆ ಗಂಭೀರ ಏಟಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ: ಮಹಿಳೆಯ ಪರ್ಸ್ ಕಳವು
ಉಡುಪಿ: ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆಂದು ಬಂದಿದ್ದ ಮಹಿಳೆಯ ಪರ್ಸ್ ಕಳವಾದ ಘಟನೆ ನಡೆದಿದೆ.
ವೀಣಾ ಕೆ. ಅವರು ರವಿವಾರ ಪುತ್ತಿಗೆ ಮಠದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದರು. ಬೆಳಗ್ಗೆ 11.30ಕ್ಕೆ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಯಾರೋ ಕಳ್ಳರು ಅವರ ಬ್ಯಾಗ್ನಲ್ಲಿದ್ದ ಪರ್ಸ್ ಕಳವು ಮಾಡಿದ್ದರು. ಪರ್ಸ್ನಲ್ಲಿ ಒಂದು ಎಟಿಎಂ ಕಾರ್ಡ್, 48,000 ರೂ. ಮೌಲ್ಯದ ಚಿನ್ನ, 2,000 ರೂ. ನಗದು ಇತ್ತು ಎಂಬುದಾಗಿ ಉಡುಪಿ ನಗರ ಠಾಣೆಗೆ ನೀಡಿದ ದೂರಿನಲ್ಲಿ ಅವರು ತಿಳಿಸಿದ್ದಾರೆ.