Advertisement

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

01:11 AM May 20, 2024 | Team Udayavani |

ಕಾಸರಗೋಡು: ಕುತ್ತಿಕ್ಕೋಲ್‌ ಬೇತೂರು ಪಾರದಲ್ಲಿ ಕಾರು ಢಿಕ್ಕಿ ಹೊಡೆದು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ.

Advertisement

ಬಂದಡ್ಕ ನಿವಾಸಿಗಳಾದ ಮಣವಾಟಿ ಜವುಳಿ ಅಂಗಡಿ ಮಾಲಕ ಕೆ.ಕೆ. ಕುಂಞಿಕೃಷ್ಣನ್‌ (64), ಪತ್ನಿ ಚಿತ್ರಕಲಾ (55) ಮೃತಪಟ್ಟವರು. ಬಂದಡ್ಕದಿಂದ ಕಾಸರಗೋಡಿಗೆ ಪ್ರಯಾಣಿಸುತ್ತಿದ್ದಾಗ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

ಮೃತದೇಹಗಳನ್ನು ಕಾಸರಗೋಡು ಜನರಲ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next