Advertisement

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

11:18 PM Jul 08, 2024 | Team Udayavani |

ಉಪ್ಪಿನಂಗಡಿ: ರಸ್ತೆ ಬದಿ ಲಾರಿ ನಿಲ್ಲಿಸಿ ಚಹಾ ಕುಡಿದು ಮತ್ತೆ ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಢಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಸೋಮವಾರ ಸಂಭವಿಸಿದೆ.

Advertisement

ಸಕಲೇಶಪುರ ಮೂಲದ ವಿನಯ ಕುಮಾರ್‌ ಹಾಗೂ ಮಂಜ ಗಾಯಗೊಂಡವರು. ಚಾಲಕರಿಗೆ ಢಿಕ್ಕಿಯಾದ ಕಾರು ಬಳಿಕ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯೊಂದರ ಹಿಂಬದಿಗೆ ಢಿಕ್ಕಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next