Advertisement

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

11:10 PM Jul 03, 2024 | Team Udayavani |

ಯಳಂದೂರು: ಸಮೀಪದ ಸಂತೆಮರಹಳ್ಳಿ ಗ್ರಾಮದ ಬಸವಟ್ಟಿ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

Advertisement

ಕಮರವಾಡಿ ಗ್ರಾಮದ ಮಹೇಶ್ (46) ಹಾಗೂ ಕಿಶೋರ್ (48) ಎಂಬ ವ್ಯಕ್ತಿಗಳೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಇವರಿಬ್ಬರೂ ದ್ವಿಚಕ್ರ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಮೈಸೂರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಇವರು ಸ್ಥಳದಲ್ಲೇ ಬಿದ್ದು ಮೃತಪಟ್ಟಿದ್ದಾರೆ.

ಈ ಬಗ್ಗೆ ಸಂತೆಮರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next