Advertisement

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

11:46 PM May 20, 2024 | Team Udayavani |

ಮಂಗಳೂರು: ಕಾರು ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 73ರ ಪಡೀಲ್‌ನಲ್ಲಿ ಸೋಮವಾರ ಸಂಭವಿಸಿದೆ.

Advertisement

ತೊಕ್ಕೊಟ್ಟು ಕಲ್ಲಾಪು ನಿವಾಸಿ ಹರೀಶ್‌ (43) ಮೃತಪಟ್ಟವರು. ಅವರು ಕೇಬಲ್‌ ನೆಟ್‌ವರ್ಕ್‌ನಲ್ಲಿ ಟೆಕ್ನೀಷಿಯನ್‌ ಆಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಅವರು ಸೋಮವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಿ.ಸಿ. ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು.

ಪರಿಣಾಮವಾಗಿ ಬೈಕ್‌ ಮತ್ತು ಹರೀಶ್‌ ಅವರನ್ನು ಕಾರು ಮುಂದಕ್ಕೆ ಎಳೆದುಕೊಂಡು ಹೋಯಿತು. ಬೈಕ್‌ ಮತ್ತೊಂದು ಕಾರಿನ ಬಳಿ ನಜ್ಜು ಗುಜ್ಜಾಗಿ ಬಿದ್ದಿತ್ತು. ಗಂಭೀರ ಗಾಯಗೊಂಡ ಹರೀಶ್‌ ಅವರನ್ನು ಆಸ್ಪತ್ರೆ ಕರೆದೊಯ್ಯಲಾಯಿತು. ಆದರೆ ಅವರು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಕಾರು ಚಾಲಕಿಯ ನಿರ್ಲಕ್ಷ್ಯ
ಕಾರು ಚಾಲಕಿಯ ದುಡುಕುತನ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು ಈ ಬಗ್ಗೆ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಕಲಂ 279, 304(ಎ) ಯಂತೆ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next