Advertisement

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

01:10 AM May 18, 2022 | Team Udayavani |

ಮೂಡುಬಿದಿರೆ: ಮಾಲಕನ ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ರಸ್ತೆ ದಾಟುತ್ತಿದ್ದಾಗ ವ್ಯಕ್ತಿಯೊಬ್ಬರು ಅಪಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಗಾಂಧೀ ನಗರದಲ್ಲಿ ಸಂಭವಿಸಿದೆ.

Advertisement

ಪುತ್ತಿಗೆ ಗ್ರಾಮದ ಹಂಡೇಲು ಕಾಪಿಕಾಡು ನಿವಾಸಿ ವಿನಯ್‌ (48) ಮೃತರು. ಗಾಂಧೀನಗರದಲ್ಲಿ ಬೀಡಿ ಕಾಂಟ್ರ್ಯಾಕ್ಟರ್‌ ಆಗಿರುವ ಸಂಜೀವ ಅವರು ಸೋಮವಾರ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಅವರ ಬೀಡಿ ಬ್ರ್ಯಾಂಚ್‌ನ ಸಹಾಯಕ ವಿನಯ್‌ ಅವರು ಅಂತಿಮ ದರ್ಶನ ಪಡೆಯಲು ತೆರಳಿದ್ದರು. ಅಂತಿಮ ದರ್ಶನ ಮುಗಿಸಿ ರಾತ್ರಿ ಗಾಂಧೀನಗರದ ಬಳಿ ರಸ್ತೆ ದಾಟುವ ವೇಳೆ ವಿನಯ್‌ ಅವರಿಗೆ ಕಾರೊಂದು ಢಿಕ್ಕಿ ಹೊಡೆದಿದೆ.

ತೀವ್ರ ಗಾಯಗೊಂಡ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next