Advertisement

Road Mishap ಮಲ್ಪೆ: ಬಸ್-ಸ್ಕೂಟರ್ ಢಿಕ್ಕಿ; ಸವಾರ ನಿವೃತ್ತ ಶಿಕ್ಷಕ ಸಾವು

12:32 AM Aug 02, 2024 | Team Udayavani |

ಮಲ್ಪೆ: ಬಸ್ಸೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ಮಲ್ಪೆ ಸಮೀಪದ ಕಲ್ಮಾಡಿಯ ಬಳಿ ನಡೆದಿದೆ.

Advertisement

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕೊಪ್ಪಲತೋಟದ ನಿವಾಸಿ ಎಂ. ಭಾಸ್ಕರ್‌ (74) ಮೃತರು.

ಆದಿಉಡುಪಿಯಿಂದ ಮಲ್ಪೆ ಕಡೆಗೆ ತೆರಳುತ್ತಿದ್ದ ಬಸ್ಸಿನ ಬ್ರೇಕ್‌ ವೈಫಲ್ಯದಿಂದ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಹೋಗುತ್ತಿದ್ದ ಭಾಸ್ಕರ್‌ ಅವರ ಸ್ಕೂಟರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.ಪರಿಣಾಮ ಭಾಸ್ಕರ್‌ ಅವರು ನೆಲಕ್ಕೆ ಬಿದ್ದರು.

ಬಸ್ಸಿನ ಚಕ್ರದಡಿ ಸಿಲುಕಿ ತಲೆಗೆ ಗಂಭೀರವಾದ ಏಟು ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಅಗಮಿಸಿ ದೂರು ದಾಖಲಿಸಿಕೊಂಡಿದ್ದಾರೆ.

ಕಲ್ಮಾಡಿ ವಾರ್ಡ್‌ನ ನಗರಸಭಾ ಸದಸ್ಯ ಸುಂದರ್‌ ಜೆ. ಕಲ್ಮಾಡಿ ಅವರು ಮೃತದೇಹವನ್ನು ಈಶ್ವರ್‌ ಮಲ್ಪೆ ಅವರ ಆ್ಯಂಬುಲೆನ್ಸ್‌ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

Advertisement

ರಾಜ್ಯಮಟ್ಟದ ಕಬಡ್ಡಿ ಆಟಗಾರರಾಗಿದ್ದರು
ಭಾಸ್ಕರ ಅವರು ಈ ಹಿಂದೆ ರಾಜ್ಯಮಟ್ಟದ ಉತ್ತಮ ಕಬಡ್ಡಿ ಆಟಗಾರರಾಗಿದ್ದರು. ಉಡುಪಿಯ ಕ್ರಿಶ್ಚಿಯನ್‌ ಹೈಸ್ಕೂಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಗುರುವಾರ ಮಧ್ಯಾಹ್ನ ಅಂಬಲಪಾಡಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮಲ್ಪೆ ಬಿಲ್ಲವರ ಸೇವಾ ಸಂಘದ ಸಕ್ರಿಯ ಸದಸ್ಯರಾಗಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next