Advertisement

Road Mishap ತೆಕ್ಕಟ್ಟೆ: ಬೈಕ್‌ಗೆ ಕಾರು ಢಿಕ್ಕಿ; ಸವಾರ ಗಂಭೀರ

11:38 PM Jun 01, 2024 | Team Udayavani |

ತೆಕ್ಕಟ್ಟೆ: ಇಲ್ಲಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜನ್ನಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜೂ. 1ರಂದು ಬೆಳಗ್ಗೆ ಸಂಭವಿಸಿದೆ.

Advertisement

ಗಾಯಾಳು ಬೈಕ್‌ ಸವಾರ ಹೆಗ್ಗೊಡ್ಲು ಪಟ್ರೆ ನಿವಾಸಿ ಸಂಜೀವ ಪೂಜಾರಿ (50) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಂದಾಪುರದ ಕಡೆಗೆ ಅತೀ ವೇಗದಿಂದ ಸಾಗುತ್ತಿದ್ದ ಕಾರು ಹಾಲಾಡಿ ಕಡೆಗೆ ಸಾಗುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್‌ ಸವಾರನ ಕೈ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು, ತತ್‌ಕ್ಷಣವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಹಾಗೂ ಬೈಕ್‌ ಸಂಪೂರ್ಣ ಜಖಂಗೊಂಡಿದ್ದು, ಕಾರು ಬದಿಯ ಚರಂಡಿಗೆ ಬಿದ್ದಿದೆ.

ಕಾರು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next