Advertisement

Road Mishap ಟಿಪ್ಪರ್ -ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು

08:50 PM Aug 08, 2024 | Shreeram Nayak |

ಸಾಗರ: ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಗುರುವಾರ (ಆ.08) ಮಧ್ಯಾಹ್ನ ಆವಿನಹಳ್ಳಿ ಸಮೀಪದಲ್ಲಿ ಅಪಘಾತ ಸಂಭವಿಸಿದೆ.

Advertisement

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಟ್ಟಿನಕಾರು ಗ್ರಾಮದ ಬೈಕ್‌ ಸವಾರ ಸಚಿನ್(19) ಶಿವಮೊಗ್ಗದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸಹಸವಾರ ಸುಮಂತ್‌ರಿಗೆ ಗಾಯಗಳಾಗಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವಿವರ
ಗೆಣಸಿಕುಣಿಯ ಸಂಪೇಕೈ ಮಂಜು ಎನ್ನುವವರಿಗೆ ಸೇರಿದ್ದ ಟಿಪ್ಪರ್ ಸಾಗರದಲ್ಲಿ ರಿಪೇರಿ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ.

ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತೀವ್ರವಾಗಿ ಗಾಯಗೊಂಡಿದ್ದ ಸಚಿನ್‌ರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Advertisement

ಸಚಿನ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next