Advertisement

Road Mishap ಬೈಕ್‌ಗೆ ಟಿಪ್ಪರ್‌ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

12:47 AM Oct 08, 2023 | Team Udayavani |

ಕೈಕಂಬ: ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದ ಮುಚ್ಚಾರು ಕ್ರಾಸ್‌ ಬಳಿ ಅ. 6ರಂದು ಸಂಜೆ 6.45ಕ್ಕೆ ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬರುತ್ತಿದ್ದ ಟಿಪ್ಪರೊಂದು ಬೆೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ, ಗುರುಪುರ ಹೊಸಮನೆ ನಿವಾಸಿ ಸಚಿನ್‌ ಕುಮಾರ್‌ ಆಚಾರ್ಯ (33) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಸಚಿನ್‌ ಕುಮಾರ್‌ ಎಚ್‌ಡಿಎಫ್‌ಸಿ ಬ್ಯಾಂಕಿನ ಉದ್ಯೋಗಿಯಾಗಿದ್ದರು. ಗುರುಪುರ ಹೊಸಮನೆಯ ದಿ| ಶ್ರೀನಿವಾಸ ಆಚಾರ್ಯ ಮತ್ತು ದಿ| ಪ್ರೇಮಾ ಆಚಾರ್ಯ ದಂಪತಿಯ ಪುತ್ರರಾಗಿದ್ದ ಅವರು ಅವಿವಾಹಿತರಾಗಿದ್ದರು. ಮೃತರು ಓರ್ವ ಸಹೋದರಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಸಚಿನ್‌ ಸಂಜೆ ಕೆಲಸ ಮುಗಿಸಿ ಗುರುಪುರಕ್ಕೆ ಬರುತ್ತಿದ್ದಾಗ ಇವರ ಬೈಕನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಟಿಪ್ಪರ್‌ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಸಚಿನ್‌ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next