Advertisement

Road Mishap; ಚಲಿಸುತ್ತಿದ್ದ ಕಾರಿನ ಟೈರ್‌ ಸ್ಫೋಟ: ಮೂವರು ಸಾವು

05:31 PM Sep 18, 2023 | Team Udayavani |

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಟೈರ್‌ ಸ್ಫೋಟಗೊಂಡು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.

Advertisement

ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್‌ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್ ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೂಬ್ಬನ ಗುರುತು ಪತ್ತೆಯಾಗಿಲ್ಲ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next