Advertisement

Road Mishap ಉದ್ಯಾವರ: ಬೈಕ್‌ಗೆ ಲಾರಿ ಢಿಕ್ಕಿ: ಸವಾರನಿಗೆ ಗಂಭೀರ ಗಾಯ

09:45 PM Sep 04, 2024 | Team Udayavani |

ಕಾಪು: ಕಾಪುವಿನಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಬೈಕ್‌ಗೆ ಈಚರ್‌ ಲಾರಿ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ರಾ.ಹೆ. 66ರ ಉದ್ಯಾವರದಲ್ಲಿ ಸೆ. 3ರಂದು ಸಂಭವಿಸಿದೆ.

Advertisement

ಮಣಿಪಾಲ ಬಡಗುಬೆಟ್ಟು ನಿವಾಸಿ ಮನೋಜ್‌ (28) ಗಾಯಾಳು. ಈಚರ್‌ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮನೋಜ್‌ ಬೈಕ್‌ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಸಾರ್ವಜನಿಕರು ಗಾಯಾಳುವನ್ನು ಉಪಚರಿಸಿ ಲಾರಿ ಚಾಲಕನ ಸಹಕಾರದೊಂದಿಗೆ ಆಟೋ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next