Advertisement

Road Mishap; ಉಳ್ಳಾಲ: ಬೈಕ್‌ ಢಿಕ್ಕಿ: ಪಾದಚಾರಿ ಸಾವು

11:22 PM Jan 21, 2024 | Team Udayavani |

ಉಳ್ಳಾಲ: ರಸ್ತೆ ದಾಟುತ್ತಿದ್ದಾಗ ಬೈಕ್‌ ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66ರ ಅಂಬಿಕಾ ರೋಡ್‌ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ. ಬೈಕ್‌ ಸವಾರ ಉಳ್ಳಾಲ ಒಂಬತ್ತುಕೆರೆ ನಿವಾಸಿ ಕಿರಣ್‌ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

Advertisement

ಮಾಡೂರು ನಿವಾಸಿ ಜನಾರ್ದನ ಆಚಾರ್ಯ (45) ಮೃತಪಟ್ಟವರು. ಮೂಲತಃ ಅಂಬ್ಲಿಮೊಗರಿನವರಾಗಿದ್ದ ಅವರು ಈ ಹಿಂದೆ ತೊಕ್ಕೊಟ್ಟು ಕರಾವಳಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದರು. ಇತ್ತೀಚಿಗೆ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದರು.

ಮಾಡೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದ ಅವರು ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಡಿವೈಡರ್‌ಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next