Advertisement

Bangalore: ಪಾಲಿಕೆ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ: ಚಾಲಕ ಸಾವು

11:25 AM Dec 18, 2023 | Team Udayavani |

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಬಿಬಿಎಂಪಿ ಕಸದ ಲಾರಿಗೆ ತಮಿಳುನಾಡು ಮೂಲದ ಮತ್ತೂಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತಮಿಳುನಾಡು ಮೂಲದ ಚಿನ್ನಣ್ಣ(55) ಮೃತ ಚಾಲಕ.

ಬನ್ನೇರುಘಟ್ಟ-ಎಲೆಕ್ಟ್ರಾನಿಕ್‌ ಸಿಟಿ ರಸ್ತೆಯ ಬದಿಯಲ್ಲಿ ಬಿಬಿಎಂಪಿ ಕಸದ ಲಾರಿ ನಿಲ್ಲಿಸಲಾಗಿತ್ತು. ಅದೇ ಮಾರ್ಗವಾಗಿ ಶನಿವಾರ ತಡರಾತ್ರಿ ತಮಿಳುನಾಡಿನಿಂದ ಕೊಬ್ಬರಿ ತುಂಬಿಕೊಂಡು ಅತೀವೇಗವಾಗಿ ಬಂದ ಲಾರಿ ಚಾಲಕ, ಬಿಬಿಎಂಪಿ ಕಸದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೊಬ್ಬರಿ ತುಂಬಿದ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next