Advertisement

ಹೊಂಡ –ಗುಂಡಿ ಮುಚ್ಚುವ ತೇಪೆ ಕಾರ್ಯ ಆರಂಭ

01:40 AM Nov 28, 2018 | Karthik A |

ಕಂಡ್ಲೂರು: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಬೆಸೆಯುವ ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಒಂದಾಗಿರುವ ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಕಂಡ್ಲೂರಿನಿಂದ ಅಂಪಾರಿಗೆ ಹೋಗುವ ರಸ್ತೆಯ ಹೊಂಡ – ಗುಂಡಿಗಳನ್ನು ಮುಚ್ಚುವ ಕಾರ್ಯ ಆರಂಭವಾಗಿದೆ. ರಾಜ್ಯ ಹೆದ್ದಾರಿಯ ಕಂಡ್ಲೂರಿನಿಂದ ಆರಂಭಗೊಂಡು ದೂಪದಕಟ್ಟೆ, ಮುಳ್ಳುಗುಡ್ಡೆ, ನೆಲ್ಲಿಕಟ್ಟೆ, ಅಂಪಾರುವರೆಗಿನ ಸುಮಾರು 5 ಕಿ.ಮೀ. ದೂರದ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡಗಳು ಕಾಣಿಸಿಕೊಂಡಿದ್ದು, ಅದಕ್ಕೀಗ ತೇಪೆ ಕಾರ್ಯ ನಡೆಯುತ್ತಿದೆ. ಈಗ ಹೊಂಡ – ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಮುಂದೆ ಅದರ ಮೇಲೆ ಮರು ಡಾಮರೀಕರಣ ಕಾರ್ಯ ನಡೆಯಲಿದೆ.

Advertisement

ಕುಂದಾಪುರದಿಂದ ಸಿದ್ದಾಪುರ, ಹೊಸಂಗಡಿ ಮಾರ್ಗವಾಗಿ ಬಾಳೇಬರೆ ಘಾಟಿ ಮೂಲಕವಾಗಿ ತೀರ್ಥಹಳ್ಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ – 52 ಇದಾಗಿದ್ದು, ನಿತ್ಯ ಸಾವಿರಕ್ಕೂ ಹೆಚ್ಚು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ದಿನಂಪ್ರತಿ ನೂರಾರು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಶಾಲಾ ವಾಹನಗಳು ಇದೇ ರಸ್ತೆಯನ್ನು ಅವಲಂಬಿಸಿವೆ.

ಕಾಟಾಚಾರದ ತೇಪೆ
ಮೂಡುಬಗೆ, ಅಂಪಾರುವಿನಿಂದ ಕಂಡ್ಲೂರುವರೆಗಿನ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ಬೃಹತ್‌ ಹೊಂಡ – ಗುಂಡಿಗಳಿದ್ದು, ಅವುಗಳಿಗೆ ಕಾಟಾಚಾರದ ತೇಪೆ ಕಾರ್ಯ ನಡೆಯುತ್ತಿದೆ ಎನ್ನುವ ಟೀಕೆ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ. ಆದರೆ ಈ ಸಂಬಂಧ ಪ್ರತಿಕ್ರಿಯಿಸಿದ ಲೋಕೋಪಯೋಗಿ ಅಧಿಕಾರಿಗಳು, ಈ ರಸ್ತೆಯನ್ನು ಮುಂದಿನ 10 ವರ್ಷಗಳ ಕಾಲ ಅಭಿವೃದ್ಧಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಈಗ ತೇಪೆ ಕಾರ್ಯ ಕೂಡ ಅವರ ಅನುದಾನದಿಂದಲೇ ನಡೆಯುತ್ತಿರುವುದು. ಈಗ ಹೊಂಡಗಳನ್ನು ಮುಚ್ಚಿದ್ದು, ಕೂಡಲೇ ಅದರ ಮೇಲೆ ಮರುಡಾಮರೀಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next