Advertisement

ರಸ್ತೆ ಸುರಕ್ಷತಾ ಸಪ್ತಾಹ: ಬೈಕ್‌ ರ್ಯಾಲಿಗೆ ಚಾಲನೆ

03:30 PM Jan 17, 2020 | Team Udayavani |

ಹಾವೇರಿ: ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಗುರುವಾರ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೃಹತ್‌ ಬೈಕ್‌ ರ್ಯಾಲಿ ನಡೆಯಿತು.

Advertisement

ಬೈಕ್‌ ರ್ಯಾಲಿಗೆ ಚಾಲನೆ ನೀಡಿ ರಸ್ತೆ ಸ್ಟಿಕ್ಕರ್‌ ಬಿಡುಗಡೆಗೊಳಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀಕಾಂತ ನಾಲ್ವಾರ, ಎಲ್ಲರೂ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಾಲನೆ ಸಮಯದಲ್ಲಿ ಮೊಬೈಲ್‌ ಬಳಸಬಾರದು ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಬಳಸಬೇಕು ಎಂದು ಹೇಳಿದರು.

ವಾಹನ ಚಾಲನೆ ಸಮಯದಲ್ಲಿ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆ ಹೊಂದಿರಬೇಕು. ವಾಹನಗಳನ್ನು ಜಾಗರೂಕತೆಯಿಂದ ಚಲಾಯಿಸಬೇಕು ಹಾಗೂ ನಿಮ್ಮ ಅವಲಂಬಿತರ ಬಗ್ಗೆ ನೆನಪಿರಲಿ ಎಂದು ಸಲಹೆ ನೀಡಿದರು.

ಮೋಟಾರು ವಾಹನ ನಿರೀಕ್ಷಕ ಶರಣಬಸಪ್ಪ ಅಕ್ಕಿ, ಕಚೇರಿ ಅಧಿಧೀಕ್ಷಕ ರಮೇಶ ದೊಡ್ಡಮನಿ, ಸತೀಶ್‌ ವೈ. ಆರ್‌. ಹಾಗೂ ಶ್ರೀಪಾದ ಬ್ಯಾಳಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next