Advertisement

ಇಲ್ಲಿ ಮಳೆಗಾಲದಲ್ಲಿ ಸಾಯಲೂ ಬಾರದು…! ಗೃಹ ಸಚಿವರ ಕ್ಷೇತ್ರದಲ್ಲಿ ಏನಿದು ಅವಸ್ಥೆ

10:02 AM Aug 07, 2022 | Team Udayavani |

ಶಿವಮೊಗ್ಗ: ಇಲ್ಲಿ ಮಳೆಗಾಲ ಬಂತೆಂದರೆ ಸಾಕು ಜನರ ಪರದಾಟ ಆರಂಭವಾಗುತ್ತದೆ. ಇಲ್ಲಿ ಮಳೆಗಾಲದಲ್ಲಿ ಬದುಕಲೂ ಕಷ್ಟ.. ಸತ್ತರೂ ಕಷ್ಟ. ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..! ಹೌದು, ಆಶ್ಚರ್ಯವಾದರೂ ಸತ್ಯ. ಇದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದ ಗ್ರಾಮವೊಂದರ ಪರಿಸ್ಥಿತಿ.

Advertisement

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಮೃತ ಶರೀರವನ್ನು ಗ್ರಾಮಸ್ಥರು ನೀರು ತುಂಬಿದ ರಸ್ತೆಯಲ್ಲಿ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.

ಕೋಡ್ಲು ಗ್ರಾಮದ ತಮ್ಮಯ್ಯ ಗೌಡ ಅವರು ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯಕ್ರಿಯೆಯ ನಡೆಸಲು ಊರ ಗ್ರಾಮಸ್ಥರು ಶವ ಹೊತ್ತುಕೊಂಡು ಊರ ಸ್ಮಶಾನಕ್ಕೆ ತಂದಿದ್ದಾರೆ. ಆದರೆ ಗ್ರಾಮದಿಂದ ಸ್ಮಶಾನಕ್ಕೆ ಬರಲು ಸರಿಯಾದ ರಸ್ತೆಯಿಲ್ಲ. ಈ ರಸ್ತೆ ಸಾಮಾನ್ಯಕ್ಕಿಂತ ತಗ್ಗು ಪ್ರದೇಶದಲ್ಲಿದ್ದು, ಮಳೆಗಾಲದಲ್ಲಿ ಮುಳುಗಡೆಯಾಗುತ್ತದೆ. ಸ್ಮಶಾನಕ್ಕೆ ಬರಬೇಕಾದರೆ ಎದೆ ಮಟ್ಟದವರೆಗಿನ ನೀರಿರುವ ರಸ್ತೆಯೇ ಅನಿವಾರ್ಯವಾಗುತ್ತದೆ.

ಇದನ್ನೂ ಓದಿ:ಬಂಗಾಲಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ : ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ

ತಮ್ಮಯ್ಯ ಗೌಡರ ಮೃತ ದೇಹವನ್ನೂ ಈ ನದಿಯಾದಂತ ರಸ್ತೆಯಲ್ಲೇ ಗ್ರಾಮಸ್ಥರು ಹೊತ್ತು ಸಾಗಿದರು. ನೀರಿನಲ್ಲೇ ಹೊತ್ತು ಸಾಗಿ, ಸುರಿವ ಮಳೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.

Advertisement

ಮಳೆಗಾಲದಲ್ಲಿ 4-5 ತಿಂಗಳು ಈ ರಸ್ತೆ ಮುಳುಗಡೆಯಾಗುತ್ತದೆ. ಪ್ರತಿ ಮಳೆಗಾಲದಲ್ಲಿ ಅಂತ್ಯಕ್ರಿಯೆ ನಡೆಸಲು ಪರದಾಟ ಮಾಡಬೇಕು. ಸ್ಮಶಾನಕ್ಕೆ ಎತ್ತರಿಸಿದ ರಸ್ತೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಲೇ ಇದ್ದಾರೆ. ಇನ್ನಾದರೂ ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಪಡಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next