Advertisement

ರಾಡಿಯೆದ್ದ ಉಪ್ಪಿನಕುದ್ರು –ಬೇಡರಕೊಟ್ಟಿಗೆ ರಸ್ತೆ

11:01 PM Jul 21, 2019 | Team Udayavani |

ಕುಂದಾಪುರ: ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಉಪ್ಪಿನಕುದ್ರು ಶಾಲೆ ಬಳಿಯಿಂದ ಬೇಡರಕೊಟ್ಟಿಗೆ ಕಡೆಗೆ ಸಂಚರಿಸುವ ರಸ್ತೆಗೆ ಈ ಬಾರಿಯೂ ಡಾಮರೀಕರಣವಾಗದೆ ರಾಡಿಯೆದ್ದು ಹೋಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

Advertisement

ಬೇಡರಕೊಟ್ಟಿಗೆಯ ಬೊಬ್ಬರ್ಯ ದೈವಸ್ಥಾನದವರೆಗಿನ ಸುಮಾರು 2 ಕಿ.ಮೀ. ರಸ್ತೆಗೆ ಕಾಂಕ್ರಿಟೀಕರಣಕ್ಕೆ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮಂಜೂರಾಗಿತ್ತು. ಆದರೆ ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸಮಸ್ಯೆಯಾಗಿದೆ.ಈ ರಸ್ತೆಯ ಎರಡೂ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸ್ವಲ್ಪ ದೂರದವರೆಗೆ ಜಲ್ಲಿ ಕಲ್ಲು ಹಾಕಲಾಗಿದೆ.

ಮತ್ತೆ ಉಳಿದ ರಸ್ತೆಯಿಡೀ ಕೆಸರುಮಯವಾಗಿದ್ದು, ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ.ಕನಿಷ್ಠ ಗ್ರಾಮ ಪಂಚಾಯತ್‌ ವತಿಯಿಂದಲಾದರೂ ಈ ರಸ್ತೆಗೆ ಜಲ್ಲಿ ಮಿಶ್ರಿತ ಮರಳನ್ನು ಹಾಕಿ, ಕೆಸರುಮಯ ರಸ್ತೆಯಿಂದ ಮುಕ್ತಿ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next