Advertisement

ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ

12:16 PM Sep 28, 2020 | Suhan S |

ಗೋಳಿಯಂಗಡಿ, ಸೆ. 27 : ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ-90ರ ಬೆಳ್ವೆ ಪೇಟೆಯಲ್ಲಿ ರಸ್ತೆಯಲ್ಲಿ ಹೊಂಡ ಆಗಿರುವುದೋ ಅಥವಾ ಹೊಂಡದಲ್ಲಿಯೇ ರಸ್ತೆ ನಿರ್ಮಿಸಲಾಗಿ ದೆಯೇ ಎನ್ನುವ ಅನುಮಾನ ಮೂಡುತ್ತದೆ.  ಕೊಲ್ಲೂರು- ಶೃಂಗೇರಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದ್ದು, ಬೆಳ್ವೆ ಪೇಟೆಯ ಆಸುಪಾಸಿನ ಒಂದು ಕಿ.ಮೀ. ವ್ಯಾಪ್ತಿಯ ಅಲ್ಲಲ್ಲಿ ಅನೇಕ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರು ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ. ಬೈಕ್‌ ಸವಾರರ ಪಾಡಂತೂ ಹೇಳತೀರದಾಗಿದೆ.

Advertisement

ರಾಜ್ಯ ಹೆದ್ದಾರಿ ಈ ರೀತಿ ಹದಗೆಟ್ಟಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಈ ರಸ್ತೆಯ ವೀಡಿಯೋ, ಚಿತ್ರಗಳನ್ನು ಹರಿಯಬಿಟ್ಟಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಈ ಬಗ್ಗೆ “ಉದಯವಾಣಿ ಸುದಿನ’ ವರದಿ ಮಾಡಿದಾಗ ತತ್‌ಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಹೊಂಡಗಳನ್ನು ತೇಪೆ ಹಾಕಿ ಮುಚ್ಚಿದ್ದರು. ಆದರೆ ಮಳೆಯಿಂದಾಗಿ ಅದು ಅಷ್ಟೇ ಬೇಗ ಎದ್ದು ಹೋಗಿದೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next