Advertisement

ಮೋದಿ ಬರ್ತಾರೆಂದು ಗುಂಡಿ ಮುಚ್ಚುತ್ತಾರೆ: ಡಿಕೆಶಿ

02:26 PM Nov 10, 2022 | Team Udayavani |

ಬೆಂಗಳೂರು: ಮೋದಿ ಬರ್ತಿದ್ದಾರೆ ಎಂದು ಗುಂಡಿ ಮುಚ್ಚಲು ಹೊರಟಿದ್ದಾರೆ. ಪ್ರಧಾನಿಗಳು ಬೆಂಗಳೂರಿಗೆ ಒಂದು ಬಹುಮಾನ ಕೊಟ್ಟು ಹೋಗಲಿ. ಗುಂಡಿ ನಗರ ಅಂತಾದರೂ ಕರೆಯಲಿ ಅಥವಾ ಬೆಸ್ಟ್ ಸಿಟಿ ಅಂತಾದರೂ ಕರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಅವರಿಗೆ ಏನು ಮಾಹಿತಿ ಇದೆಯೋ ಆ ರೀತಿ ಕರಪ್ಷನ್ ಕ್ಯಾಪಿಟಲ್ ಅಂತ ಕರೆಯಲಿ. ಕಾಲೇಜು ಮಕ್ಕಳನ್ನು ಕಾರ್ಯಕ್ರಮಕ್ಕೆ ಆಹ್ವಾನ ಹೊರಡಿಸಿದ್ದಾರೆ. ಇದು ಸರ್ಕಾರಕ್ಕೆ ಶೇಮ್ ಅಲ್ಲವಾ? ಎಂದು ಪ್ರಶ್ನಿಸಿದರು.

ಇದನ್ನು ನೋಡಿದರೆ ಬಿಜೆಪಿ ವೀಕ್ ಆಗಿದೆ ಎಂದು ಅನ್ನಿಸುತ್ತಿದೆ. ರಸ್ತೆ ಗುಂಡಿಗೆ ನೂರಾರು ಜನ ಸತ್ತರು. ಎಲ್ಲಾ ಪಾರ್ಟಿಯವರು ಗುಂಡಿಗಳ ಹೋಮ, ಪೂಜೆ, ಅಭಿಷೇಕ ಮಾಡಿದರು. ಮೋದಿ ಬರ್ತಿದ್ದಾರೆ ಅಂತ ಗುಂಡಿ ಮುಚ್ಚುತ್ತಿದ್ದಾರೆ, ಸಂತೋಷ ಎಂದು ವ್ಯಂಗ್ಯವಾಡಿದರು.

ಏರ್ ಪೋರ್ಟ್ ನಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರದ ಹಣದಲ್ಲಿ ಪ್ರತಿಮೆ ನಿರ್ಮಿಸಿದ್ದೇ ದೊಡ್ಡ ಅಪರಾಧ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾವು ಜಾಗ, ದುಡ್ಡು ಕೊಟ್ಟಿದ್ದೇವೆ. ಸುಮಾರು ನಾಲ್ಕು ಸಾವಿರ ಎಕರೆಗೂ ಹೆಚ್ಚು ಜಾಗ ನೀಡಿದ್ದೇವೆ. ಇದರಲ್ಲಿ 2000 ಎಕರೆ ಜಮೀನಿನಲ್ಲಿ ಎಕರೆಗೆ ಕೇವಲ ಆರು ಲಕ್ಷಕ್ಕೆ ಕೊಟ್ಟಿದ್ದೇವೆ. ಅವರಿಗೆ ಹೇಳಿದ್ದರೆ ಪ್ರತಿಮೆ ನಿರ್ಮಿಸುತ್ತಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next