Advertisement

CM ಕುರ್ಚಿಗೆ ಹಾದಿಬೀದಿ ಚರ್ಚೆ ಸಲ್ಲದು: ಮಂಜುನಾಥ ಭಂಡಾರಿ

11:09 PM Sep 10, 2024 | Team Udayavani |

ಬೆಂಗಳೂರು: ಕಾಂಗ್ರೆಸ್‌ ಅತ್ಯಂತ ಶಿಸ್ತಿನ ಪಕ್ಷ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ಹಾದಿಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ. ಆ ಕಾರಣಕ್ಕೆ ಹೈಕಮಾಂಡ್‌ಗೆ ಪತ್ರ ಬರೆಯುವ ಮೂಲಕ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಅಷ್ಟೆ. ಮತ್ತೊಬ್ಬರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

Advertisement

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನಮ್ಮ ಪಕ್ಷಕ್ಕೆ ಹೈಕಮಾಂಡ್‌ ಇದೆ. ಅದು ಎಲ್ಲವನ್ನೂ ನಿರ್ಧರಿಸುತ್ತದೆ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯವೇ ಬೇಡ ಎಂದರೆ ಹೇಗೆ ಎಂದು ಡಾ| ಪರಮೇಶ್ವರ್‌ ಕೇಳಿರುವ ಬಗ್ಗೆ ಗಮನಸೆಳೆದಾಗ, ನನ್ನ ಅಭಿಪ್ರಾಯ ನಾನು ತಿಳಿಸಿದ್ದೇನೆ. ಆ ಹೇಳಿಕೆ (ಪರಮೇಶ್ವರ್‌ ಹೇಳಿಕೆ)ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next