Advertisement

ವಿಟ್ಲ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ

04:17 PM Dec 25, 2020 | keerthan |

ವಿಟ್ಲ: ಮಹಿಳೆಯೊಬ್ಬರೇ ಮನೆಯಲ್ಲಿದ್ದ ಸಮಯದಲ್ಲಿ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ಶುಕ್ರವಾರ ನಡೆದಿದೆ.

Advertisement

ಕಾಂತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಆಟೋ ಚಾಲಕ ರಫೀಕ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ.

ರಫೀಕ್ ಅವರು ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳಿದ್ದರು. ಅವರ ಜತೆ ಅವರ 10 ವರ್ಷದ ಪುತ್ರ ಕೂಡಾ ತೆರಳಿದ್ದರು. ಪತ್ನಿ ಜೈನಾಬ ಅವರು ಒಬ್ಬರೇ ಇದ್ದರು.  ಈ ಬಗ್ಗೆ ಮಾಹಿತಿ ಪಡೆದ ವ್ಯಕ್ತಿ ಮಹಿಳೆಯನ್ನು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದಿದ್ದಾರೆ.

ಇದನ್ನೂ ಓದಿ:ಪುತ್ತೂರು: ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಉದ್ಯಮಿ ಸಾವು!

Advertisement

ರಫೀಕ್ ಅವರ ಮನೆಯ ಸುತ್ತಲೂ ಮನೆಗಳಿದ್ದರೂ ಘಟನೆ ಯಾರ ಗಮನಕ್ಕೂ ಬಂದಿಲ್ಲ. ರಫೀಕ್ ಅವರು ಮಸೀದಿಯಿಂದ ವಾಪಸಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next