Advertisement

Robbery: ಒಂಟಿಯಾಗಿ ಓಡಾಡುವವರ ಸುಲಿಗೆ ಮಾಡುತ್ತಿದ್ದ ದರೋಡೆಕೋರನ ಸೆರೆ

04:07 PM Sep 05, 2023 | Team Udayavani |

ಬೆಂಗಳೂರು: ಒಂಟಿಯಾಗಿ ಓಡಾಡುವವರನ್ನು ಸುಲಿಗೆ ಮಾಡುತ್ತಿದ್ದ ಅಂತಾರಾಜ್ಯ ಸುಲಿಗೆ ಕೋರರನನ್ನು ಭಾರತೀನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ನೆರೆ ರಾಜ್ಯದ ಸೈಯದ್‌ ಆಸಿಫ್‌ (22) ಬಂಧಿತ. ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು ಮೊಬೈಲ್‌ಗ‌ಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಮೇ 18 ರಂದು ಬೆಳಗಿನ ಜಾವ 5.30ರಲ್ಲಿ ಕಾಕ್‌ಬರ್ನ್ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಪ್ರತಿಭಾ ಭಟ್‌ ಎಂಬವರ ಬೈಕ್‌ ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ಅವರ ಬ್ಯಾಗ್‌ ಮತ್ತು ಮೊಬೈಲ್‌ ಸುಲಿಗೆ ಮಾಡಿದ್ದ. ಈ ಸಂಬಂಧ ಭಾರತೀನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈತನ ವಿಚಾರಣೆಯಲ್ಲಿ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ 17 ವಾಹನ ಕಳವು, ನೆರೆ ರಾಜ್ಯದಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಪುಲಕೇಶಿನಗರ ಉಪವಿಭಾಗದ ಎಸಿಪಿ ಎಸ್‌.ಆರ್‌.ಗೀತಾ ಮತ್ತು ಠಾಣಾಧಿಕಾರಿ ಫಿರೋಜ್‌ ಮೊಹಮ್ಮದ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next