Advertisement

Arrested: ದರೋಡೆಗೆ ಸಂಚು; ನಾಲ್ವರ ಬಂಧನ, ಮಾರಕಾಸ್ತ್ರ ವಶಕ್ಕೆ

03:47 PM Feb 27, 2024 | Team Udayavani |

ಬೀದರ್:‌  ಭಾಲ್ಕಿ ತಾಲೂಕಿನ ಕುರುಬಖೇಳಗಿ ಗ್ರಾಮ ವ್ಯಾಪ್ತಿಯ ಧರಿಸಿದ್ದೇಶ್ವರ ಮಂದಿರ ಬಳಿ ಸೋಮವಾರ ಮಧ್ಯರಾತ್ರಿ ದರೋಡೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿತರನ್ನು ಜಿಲ್ಲಾ ಪೊಲೀಸರು ಬಂಧಿಸಿ, ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಓರ್ವ ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.

Advertisement

ಭಾಲ್ಕಿ ಮತ್ತು ಹುಮನಾಬಾದ್ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರಯಾಣಿಕರನ್ನು ಮಾರಕಾಸ್ತ್ರಗಳಿಂದ ಹೆದರಿಸಿ, ಅವರಿಂದ ಹಣ ಮತ್ತು ಬೆಳೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಐದು ಜನರ ತಂಡ ಸಂಚು ರೂಪಿಸಿತ್ತು. ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತಿನಲ್ಲಿದ್ದ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ದರೋಡೆ ಸಂಚನ್ನು ವಿಫಲಗೊಳಿಸಿದ್ದಾರೆ.

ಆರೋಪಿತಗಳಿಂದ ಮಾರಕಾಸ್ತ್ರ ಜತೆಗೆ ಖಾರದ ಪುಡಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ. ಖಟಕಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಬಂಧಿತ ನಾಲ್ವರು ಆರೋಪಿಗಳ ಪೈಕಿ ಇಬ್ಬರ ಮೇಲೆ ಈಗಾಗಲೇ ಮಾರಣಾಂತಿಕ ಹಲ್ಲೆ, ಸುಲಿಗೆ, ಮನೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ತಲೆ ಮರೆಸಿಕೊಂಡ ಆರೋಪಿತನ ಮೇಲೆ ಈಗಾಗಲೇ ಗೂಂಡಾ ಕಾಯ್ದೆಯಡಿ ಕಳೆದ ವರ್ಷ ಕ್ರಮ ಕೈಗೊಳ್ಳಲಾಗಿತ್ತು ಎಂದು ತಿಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಡಕಾಯತಿ ಸಂಚು ವಿಫಲಗೊಳಿಸಿದ ಪೊಲೀಸ್ ಅದಿಕಾರಿ ಮತ್ತು ತಂಡದ ಕೆಲಸವನ್ನು ಪ್ರಶಂಸಿಸಿ ನಗದು ಬಹುಮಾನ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next