Advertisement

ಬೈಕ್‌ ಸವಾರನ ಬೆದರಿಸಿ ದರೋಡೆ

01:05 PM Apr 12, 2018 | Team Udayavani |

ಕೆ.ಆರ್‌.ಪುರ‌: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಹೆಲ್ಮೆಟ್‌ಧಾರಿ ದುಷ್ಕರ್ಮಿಗಳು, ಮಾರಕಾಸ್ಟ್ರದಿಂದ ಬೆದರಿಸಿ ದರೋಡೆ ಮಾಡಿರುವ ಘಟನೆ ಕೆ.ಆರ್‌.ಪುರದ ಪೈ ಲೇಔಟ್‌ನಲ್ಲಿ ನಡೆದಿದೆ.

Advertisement

ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಮುಂಜಾನೆ ಐದು ಘಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಕೆಲಸದ ಸ್ಥಳಕ್ಕೆ ಹೋಗುವಾಗ, ಅವರನ್ನು ಎರಡು ದ್ವಿಚಕ್ರ ವಾಹನಗಳಲ್ಲಿ ಹಿಂಬಾಲಿಸಿದ ಮೂವರು ದುಷ್ಕರ್ಮಿಗಳು, ಪೈ ಲೇಔಟ್‌ನಲ್ಲಿ ಬೈಕ್‌ ತಡೆದಿದ್ದಾರೆ. ನಂತರ ವ್ಯಕ್ತಿಗೆ ಲಾಂಗ್‌ ತೋರಿಸಿ, ಹಣ ಮತ್ತು ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಈ ಕೃತ್ಯ ಪಕ್ಕದಲ್ಲೆ ಇರುವ ಅಪಾರ್ಟಮೆಂಟ್‌ ಒಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ದರೋಡೆಗೆ ಒಳಗಾದ ವ್ಯಕ್ತಿ ಯಾರೆಂಬುದು ತಿಳಿದುಬಂದಿಲ್ಲ. ಜತೆಗೆ ಆ ವ್ಯಕ್ತಿ ಯಾವ ಪೊಲೀಸ್‌ ಠಾಣೆಯಲ್ಲೂ ದೂರು ದಾಖಲಿಸಿಲ್ಲ. ಸಿಸಿಟಿವಿಯಲ್ಲಿ ಸೆರೆಯಾಗಿರುವ ದರೋಡೆ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಎಚ್ಚತ್ತ ಮಹದೇವಪುರ ಠಾಣೆ ಪೋಲಿಸರು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. 

ಕೋಲಾರ ಭಾಗದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತವಾಗಿದೆ. ಈ ರೀತಿ ಘಟನೆಗಳು ನಡೆದಾಗ ಸಾರ್ವಜನಿಕರು ಭಯಪಡದೆ ಪೊಲೀಸ್‌ ಠಾಣೆಗೆ ಬಂದು ದೂರು ನೀಡಬೇಕು. ಪ್ರಸ್ತುತ ಪ್ರಕರಣದ ಆರೋಪಿಗಳ ಪತ್ತೆಗೆ ಈಗಾಗಲೇ ವಿಶೇಷ ತಂಡ ರಚಿಸಲಾಗಿದ್ದು, ಕೆಲವೇ ದಿನಗಳಲ್ಲಿ ದುಷ್ಕರ್ಮಿಗಳ ಪತ್ತೆ ಮಾಡುವುದಾಗಿ ವೈಟ್‌ ಫೀಲ್ಡ್‌ ವಿಭಾಗದ ಡಿಸಿಪಿ ಅಬ್ದುಲ್‌ ಅಹದ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next