Advertisement

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

02:31 PM Apr 10, 2022 | Team Udayavani |

ಬೆಳ್ತಂಗಡಿ: ದೇಶ ವಿದೇಶಗಳಲ್ಲಿ ಸಂಚಲನ ಮೂಡಿಸಿರುವ ಕೆ.ಜಿ.ಎಫ್. ಚಿತ್ರದ ನಾಯಕ ನಟ ರಾಕಿ ಬಾಯ್ ಯಶ್ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.

Advertisement

ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಬಳಿಕ ಅನ್ನ ಪ್ರಸಾದ ಸ್ವೀಕರಿಸಿ, ಉಜಿರೆಯ ಮಣ್ಣಿನ ಹರಕೆಯ ಪ್ರಸಿದ್ಧ ಕ್ಷೇತ್ರ ಸುರ್ಯ ಶ್ರೀ ಸದಾಶಿರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಕ್ಷೇತ್ರದ ಆನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಶತೀಶ್ಚಂದ್ರ ಸುರ್ಯಗುತ್ತು ಬರಮಾಡಿಕೊಂಡರು.

ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Advertisement

ಇದಕ್ಕೂ ಮುನ್ನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಮಾಡಿ ದೇವರ ದರ್ಶನ ಪಡೆದರು. ಇನ್ನೇನು ಎ.14 ರಂದು ಕೆ.ಜಿ.ಎಫ್. 2 ಚಿತ್ರವು ದೇಶ ವಿದೇಶಗಲ್ಲಿ ತೆರೆ ಕಾಣಲಿದ್ದು ಚಿತ್ರದ ಯಶಸ್ಸಿಗಾಗಿ ನಾಡಿನ ಪವಿತ್ರ ತೀರ್ಥ ಕ್ಷೇತ್ರಗಳ ಸಂದರ್ಶನ ಮಾಡುವ ಸಲುವಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ, ಸುರ್ಯ ದೇವಸ್ಥಾನ ಭೇಟಿಮಾಡಿರುವುದಾಗಿ ಯಶ್ ಉದಯವಾಣಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next