Advertisement

ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಧರೆಗುರುಳಿದ ಬಂಡೆಗಳು… ಅಧಿಕಾರಿಗಳಿಂದ ಪರಿಶೀಲನೆ

02:29 PM Aug 22, 2024 | Team Udayavani |

ಚಾರ್ಮಾಡಿ: ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಇದೀಗ ಅಲ್ಲಲ್ಲಿ ಸಣ್ಣ ಸಣ್ಣ ಗುಡ್ಡಗಳು ಕುಸಿಯುತ್ತಿದೆ ಎನ್ನಲಾಗಿದೆ, ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಇದಾಗಿದ್ದು, ಚಾರ್ಮಾಡಿ ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡಗಳು ಕುಸಿದಿದೆ ಎನ್ನಲಾಗಿದೆ,

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ರಭಸದಿಂದ ಮಳೆನೀರು ಹರಿಯುತ್ತಿದ್ದು, ಮಳೆ ನೀರಿನ ಜೊತೆ ಕಲ್ಲುಗಳು ರಸ್ತೆಗೆ ತೇಲಿ ಬಂದಿದ್ದು ಇದೀಗ ಅಡಿಕ್ರಿಗಳ ತಂಡ ಘಟನಾ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು ಭಾರಿ ಮಳೆಯಿಂದ ಗುಡ್ಡ ಕುಸಿತ ಸಂಭವಿಸಿದ್ದು ಆದರೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next