Advertisement

ಏಕದಿನ ಸರಣಿಗೂ ರೋಹಿತ್‌ ಶರ್ಮ ಅನುಮಾನ !

11:13 PM Dec 29, 2021 | Team Udayavani |

ಹೊಸದಿಲ್ಲಿ: ಭಾರತದ ಏಕದಿನ ಮತ್ತು ಟಿ20 ತಂಡಗಳ ನೂತನ ನಾಯಕನಾಗಿ ನೇಮಕವಾಗಿರುವ ರೋಹಿತ್‌ ಶರ್ಮ ಗಾಯದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯಿಂದ ಹೊರಗುಳಿದಿದ್ದರು. ಆದರೆ ಮುಂಬರುವ ಏಕದಿನ ಸರಣಿಗೂ ಅವರು ಲಭ್ಯವಾಗುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ಆಗ ಉಪನಾಯಕ ಕೆ.ಎಲ್‌. ರಾಹುಲ್‌ ನಾಯಕತ್ವ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಮಂಡಿರಜ್ಜು ನೋವಿನಿಂದ ಬಳಲುತ್ತಿರುವ ರೋಹಿತ್‌ ಸದ್ಯ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ (ಎನ್‌ಸಿಎ) ಚಿಕಿತ್ಸೆ ಪಡೆಯುತ್ತಿದ್ದಾರೆ.

“ರೋಹಿತ್‌ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಸೂಕ್ತ ಸಮಯಕ್ಕೆ ಚೇತರಿಸಿಕೊಳ್ಳದಿದ್ದರೆ ಏಕದಿನ ಸರಣಿಗಾಗಿ ದಕ್ಷಿಣ ಆವರನ್ನು ದಕ್ಷಿಣ ಆಫ್ರಿಕಾಗೆ ಕಳುಹಿಸುವುದು ಸಮಂಜಸವಲ್ಲ. ಆಗ ಕೆ.ಎಲ್‌.ರಾಹುಲ್‌ ಅವರಿಗೆ ನಾಯಕತ್ವದ ಹೊಣೆ ನೀಡಲಾಗುವುದು’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next