Advertisement

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

02:04 AM May 04, 2024 | Team Udayavani |

ಹೈದರಾಬಾದ್‌: ದೇಶಾದ್ಯಂತ ಸದ್ದು ಮಾಡಿದ್ದ ರೋಹಿತ್‌ ವೆಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದಾರೆ. ರೋಹಿತ್‌ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯಲ್ಲ. ಆತನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ ಎಂದು ಹೇಳಿದ್ದಾರೆ. ಈ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡಿದ್ದಾರೆ.

Advertisement

ಹಲವು ರೀತಿಯ ಒತ್ತಡಗಳಿಗೆ ಸಿಲುಕಿ ರೋಹಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ನೇರವಾಗಿ ಯಾರೂ ಕಾರಣರಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ರಾಜಕೀಯ ಕಾರಣಕ್ಕಾಗಿ ರೋಹಿತ್‌ ಅಧ್ಯಯನದಲ್ಲಿ ಹಿಂದೆ ಬಿದ್ದಿದ್ದ. ಅಲ್ಲದೆ ಆತನ ತಾಯಿ ಅಕ್ರಮವಾಗಿ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಸಿದ್ಧಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರೋಹಿತ್‌ ತನ್ನ ಅಧ್ಯಯನಕ್ಕಿಂತ ಹೆಚ್ಚಾಗಿ ಕಾಲೇಜು ರಾಜಕೀಯದಲ್ಲಿ ತೊಡಗಿಕೊಂಡಿದ್ದ. 2 ವರ್ಷಗಳ ಬಳಿಕ ಪಿಎಚ್‌.ಡಿ. ಅಧ್ಯಯನವನ್ನು ತೊರೆದು, ಮತ್ತೂಂದು ಪಿಎಚ್‌.ಡಿ.ಗೆ ಸೇರಿಕೊಂಡಿದ್ದ. ಅಲ್ಲದೆ ನಕಲಿ ಜಾತಿ ಪ್ರಮಾಣಪತ್ರ ಮಾಡಿಸಿರುವುದೂ ರೋಹಿತ್‌ಗೆ ತಿಳಿದಿತ್ತು. ಆತ ಆತ್ಮಹತ್ಯೆ ಮಾಡಿಕೊಳ್ಳಲು ಇದೂ ಪ್ರಮುಖ ಕಾರಣವಾಗಿದೆ. ಒಂದು ವೇಳೆ ಇದು ಬಹಿರಂಗಗೊಂಡಿದ್ದರೆ, ಆತನ ಡಿಗ್ರಿ ವ್ಯರ್ಥವಾಗುತ್ತಿತ್ತು ಎಂದು ವರದಿ ತಿಳಿಸಿದೆ.

ಏನಿದು ಪ್ರಕರಣ?
ಹೈದರಾಬಾದ್‌ ಸೆಂಟ್ರಲ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ರೋಹಿತ್‌ ವೆಮುಲ 2016ರ ಜ.17ರಂದು ತನ್ನ ಹಾಸ್ಟೆಲ್‌ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಾದ ಮಾರನೇ ದಿನ ಕ್ಯಾಂಪಸ್‌ನಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಜಾತಿ ತಾರತಮ್ಯಕ್ಕೆ ತುತ್ತಾಗಿ ರೋಹಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಹೇಳಲಾಗಿತ್ತು. ಹೀಗಾಗಿ ಈ ಪ್ರಕರಣ ದೇಶಾದ್ಯಂತ ಕಾವು ಪಡೆದುಕೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next