Advertisement

ಮಳೆಗೆ ಮನೆಯ ಛಾವಣಿ ಕುಸಿತ: ಪ್ರಾಣಾಪಾಯದಿಂದ ಪಾರಾದ ಕುಟುಂಬ

01:35 PM Jul 09, 2022 | Team Udayavani |

ಗದಗ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯ ಪರಿಣಾಮ ಶನಿವಾರ ನಸುಕಿನ ಜಾವ ಜಿಲ್ಲೆಯ ರೋಣ ತಾಲೂಕಿನ ಮೇಗೂರು ಗ್ರಾಮದಲ್ಲಿ ಮನೆಯ ಛಾವಣಿ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

Advertisement

ಗ್ರಾಮದ ಶಿವಾನಂದ ಅರಹುಣಸಿ ಎಂಬುವರ ಮನೆಯ ಛಾವಣಿ ಕುಸಿದಿದ್ದು, ಮನೆಯೊಳಗೆ ರಾತ್ರಿ ಕುಟುಂಬದ ಏಳು ಸದಸ್ಯರು ಮಲಗಿ ನಿದ್ರಿಸುತ್ತಿದ್ದರು. ನಸುಕಿನ ಜಾವ ಶಬ್ದ ಬರುತ್ತಿದೆ ಎಂದು  ತಕ್ಷಣ ಮನೆಯಿಂದ ಹೊರಭಾಗಕ್ಕೆ ಬಂದು ನಿಂತಿದ್ದಾರೆ. ನೋಡ ನೋಡುತ್ತಿದ್ದಂತೆ ಇಡೀ ಮನೆಯ ಛಾವಣಿ ಕುಸಿದು ಬಿದ್ದಿದೆ. ಏಳು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಅಮರನಾಥ ದುರಂತ: ಯಾತ್ರೆ ಕೈಗೊಂಡ ಬಂಟ್ವಾಳದ 27 ಜನರ ತಂಡ ಸುರಕ್ಷಿತ

ಛಾವಣಿ ಕುಸಿದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಅಡುಗೆ ಸಾಮಗ್ರಿ ಹಾಗೂ ಇನ್ನಿತರೇ ವಸ್ತುಗಳು ಹಾನಿಗೊಳಗಾಗಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next