Advertisement

ಮೊಹರಂ ಮೆರವಣಿಗೆ ವೇಳೆ ಮೇಲ್ಛಾವಣಿ ಕುಸಿದು 1 ಬಲಿ, ಹಲವರಿಗೆ ಗಾಯ 

11:08 AM Sep 21, 2018 | |

ಹೊಸಪೇಟೆ: ಚಿತ್ತವಾಡಗಿಯಲ್ಲಿ  ಶುಕ್ರವಾರ ಬೆಳಗಿನ ಜಾವ ಮೊಹರಂ ಮೆರವಣಿಗೆ ಸಾಗುತ್ತಿದ್ದಾಗ  ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಮೆರವಣಿಗೆ ವೀಕ್ಷಿಸಲು ಸ್ಥಳೀಯ ನಿವಾಸಿಗಳು ಸೇರಿದ್ದ ವೇಳೆ ಏಕಾಏಕಿ ಛಾವಣಿ ಕುಸಿದು ಬಿದ್ದಿದೆ.ಪರಿಣಾಮವಾಗಿ 14 ವರ್ಷದ ಬಾಲಕಿ ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಗಾಯಾಳುಗಳನ್ನು ಹೊಸಪೇಟೆಯ ಖಾಸಗಿ ಆಸ್ಪತ್ರೆಗಳು ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿವ ಶಿವಾನಂದ ಪಾಟೀಲ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಣೆ ನಡೆಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next