Advertisement

Roopanthara; ಬದುಕು ಬವಣೆಗಳ ಸುತ್ತ ರೂಪಾಂತರ

03:41 PM Jul 18, 2024 | Team Udayavani |

ಕನ್ನಡದಲ್ಲಿ ಒಂದಷ್ಟು ಹೊಸ ಪ್ರಯೋಗದ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈ ಮೂಲಕ ಹೊಸದನ್ನು ಪ್ರಯತ್ನಿಸುತ್ತಿರುವುದಂತೂ ಸತ್ಯ. ಈಗ ಇದೇ ರೀತಿಯ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ರೂಪಾಂತರ’. ಈ ಚಿತ್ರ ಜುಲೈ 26ರಂದು ತೆರೆಕಾಣಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.

Advertisement

ರೂಪಾಂತರ ಚಿತ್ರದ ಕುರಿತು ಮಾತನಾಡಿದ ರಾಜ್‌ ಬಿ ಶೆಟ್ಟಿ, “ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್‌ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. ರೂಪಾಂತರ ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ಅವರೆಲ್ಲಾ ರೂಪಾಂತರ ಗೊಳ್ಳುವುದೆ ಚಿತ್ರದ ಕಥೆ. ಒಂದು ಮೊಟ್ಟೆಯ ಕಥೆ ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್‌ ಬುದ್ಧ ಫಿಲಂಸ್‌ ಮೂಲಕ ಚಿತ್ರವನ್ನು ಜುಲೈ 26 ರಂದು ಬಿಡುಗಡೆ ಮಾಡುತ್ತಿದ್ದೇವೆ’ ಎಂದರು.

ಸುಹಾನ್‌ ಪ್ರಸಾದ್‌ ಈ ಸಿನಿಮಾದ ನಿರ್ಮಾಪಕರು. “ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ. ರಾಜ್‌ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು’ ಎಂದರು.

ಐದು ಪ್ರಮುಖ ಪಾತ್ರಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ರಾಜ್‌ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಮಿಥಿಲೇಶ್‌ ಎಡವಲತ್‌.

ಚಿತ್ರದಲ್ಲಿ ನಟಿಸಿರುವ ಅಂಜನ್‌ ಭಾರದ್ವಾಜ್‌ ಹಾಗೂ ಲೇಖಾ ನಾಯ್ಡು ಅವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಕುರಿತು ಮಿಥುನ್‌ ಮುಕುಂದನ್‌ ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next