Advertisement

ಸಿದ್ದರಾಮಯ್ಯ,ಗುಂಡೂರಾವ್‌ ವಿರುದ್ಧ ರೋಷನ್‌ ಬೇಗ್‌ ಆಕ್ರೋಶ

09:24 AM May 22, 2019 | Vishnu Das |

ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ ವಿಪಕ್ಷಗಳಲ್ಲಿ ತಳಮಳ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತಭುಗಿಲೆದ್ದಿದ್ದು, ಮಾಜಿ ಸಚಿವ, ಶಾಸಕ ರೋಷನ್‌ ಬೇಗ್‌ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್‌ ಬೇಗ್‌ , ಎಕ್ಸಿಟ್‌ ಪೋಲ್‌ ನೋಡಿದರೆ ನನಗೆ ಬೇಸರವಾಗುತ್ತದೆ. ಸಿದ್ದರಾಮಯ್ಯ ಮತ್ತು ದಿನೇಶ್‌ ಗುಂಡೂರಾವ್‌ ಸೇರಿಕೊಂಡು ಕಾಂಗ್ರೆಸ್‌ ಪಕ್ಷವನ್ನು ಈ ಗತಿಗೆ ತಂದಿದ್ದಾರೆ ಎಂದರು.

ಕಾಂಗ್ರೆಸ್‌ ನಾಯಕರು ನಡೆದುಕೊಂಡ ರೀತಿ ಸರಿಯಿಲ್ಲ, ಅಹಂಕಾರ, ದುರಹಂಕಾರ ಸರಿಯಲ್ಲ . ನಿಮ್ಮ ನಡತೆ ನೋಡಿ ಎಲ್ಲರಿಗೂ ಬೇಸರ ಆಗಿದೆ ಎಂದರು.

ಇದೇ ವೇಳೆ ಕಾಂಗ್ರೆಸ್‌ ಅಲ್ಪಸಂಖ್ಯಾತರ ಪರ ಕೆಲಸ ಮಾಡುತ್ತಿಲ್ಲ, ಅಲ್ಪಸಂಖ್ಯಾತರನ್ನು ತುಳಿಯುತ್ತಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್‌ಗೆ ಈ ಗತಿ ಬಂದಿದೆ. ದಿನೇಶ್‌ ಗುಂಡೂರಾವ್‌ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

Advertisement

ಲಿಂಗಾಯತ ಧರ್ಮ ಒಡೆಯಲು ಮುಂದಾಗಿರುವುದರಿಂದ ಕಾಂಗ್ರೆಸ್ 79 ಸ್ಥಾನಕ್ಕೆ.ಇಳಿಯಲು ಕಾರಣವಾಗಿದೆ ಎಂದರು.

ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ಯೋಚಿಸುತ್ತೇನೆ ಎಂದು ಕುತೂಹಲ ಮೂಡಿಸಿದ್ದಾರೆ.

ಜಮೀರ್‌ ತಿರುಗೇಟು
ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಸುದ್ದಿಗೋಷ್ಠಿ ನಡೆಸಿ ರೋಷನ್‌ ಬೇಗ್‌ಗೆ ತಿರುಗೇಟು ನೀಡಿದರು. ಬೇಗ್‌ ಅಧಿಕಾರ ದಾಹಿ, ಅವರಿಗೆ ಗೊತ್ತಿದ್ದರೆ ಮೊದಲೆ ಯಾಕೆ ಹೇಳಲಿಲ್ಲ, ಕಾಂಗ್ರೆಸ್‌ ಸರ್ಕಾರ ಬಂದಾಗಲೆಲ್ಲ ಸಚಿವರಾಗಿದ್ದಾರೆ, ಅವರು ಅಧಿಕಾರ ಅನುಭವಿಸಿದ್ದಾರೆ. ಅಧಿಕಾರ ಕೊಟ್ಟಾಗ ಕಾಂಗ್ರೆಸ್‌ ಒಳ್ಳೆಯ ಪಕ್ಷ ವೇ ಎಂದು ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಇಷ್ಟು ದಿನ ಕಾಂಗ್ರೆಸ್ ನಲ್ಲಿ ಅಧಿಕಾರ ಅನುಭವಿಸಿದಾಗ ಎಲ್ಲವೂ ಸರಿಯಾಗಿತ್ತು. ಇವರಿಗೆ ಎಂಪಿ ಟಿಕೆಟ್ ನೀಡಿಲ್ಲ ಎಂದ ಮಾತ್ರಕ್ಕೆ ಕಾಂಗ್ರೆಸ್ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ. ಎಕ್ಸಿಟ್ ಪೋಲ್ ನೋಡಿ ಅವರು ಹೇಳಿಕೆ ನೀಡುತ್ತಿದ್ದಾರೆ. ಅವರು ರಾಜಕೀಯವಾಗಿ ಬೇರೆ ತೀರ್ಮಾನ ಮಾಡಿದಂತೆ ಕಾಣುತ್ತದೆ. ಅವರು ಹಿರಿಯ ನಾಯಕರು ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next