Advertisement

ರೌಡಿ ಲಕ್ಷ್ಮಣ್‌ ಕೊಲೆ ಕೇಸ್‌ ಸಿಸಿಬಿಗೆ

06:27 AM Mar 09, 2019 | Team Udayavani |

ಬೆಂಗಳೂರು: ರೌಡಿಶೀಟರ್‌ ಲಕ್ಷ್ಮಣ್‌ ಕೊಲೆ ಪ್ರಕರಣ ಕೇಂದ್ರ ಅಪರಾಧ ತನಿಖಾ ವಿಭಾಗಕ್ಕೆ (ಸಿಸಿಬಿ) ವರ್ಗಾವಣೆಯಾಗಿದೆ. ಎರಡು ರೌಡಿ ಬಣಗಳ ನಡುವಿನ ವೈಷಮಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ.

Advertisement

ಹೀಗಾಗಿ ಪ್ರಕರಣದ ಗಂಭೀರತೆ ಅರಿತು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್‌ ಕಮಿಷನರ್‌ ಟಿ.ಸುನೀಲ್‌ ಕುಮಾರ್‌ ಶುಕ್ರವಾರ ಆದೇಶಿಸಿದ್ದಾರೆ. ಸ್ಥಳೀಯ ಪೊಲೀಸರು ನಡೆಸಿರುವ ಪ್ರಾಥಮಿಕ ತನಿಖೆಯ ವರದಿ, ದಾಖಲೆಗಳು, ಸಾಕ್ಷ್ಯಾಧಾರ ಪರಿಶೀಲಿಸಿ ತನಿಖೆ ಮುಂದುವರಿಯಲಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿ ತಿಳಿಸಿದರು.

ಗುರುವಾರ ರೌಡಿ ಲಕ್ಷ್ಮಣ್‌ ಕೊಲೆ ನಡೆದ ಸ್ಥಳದ ಸುತ್ತಮುತ್ತಲಿನ ಕಟ್ಟಡಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳ ಡಿವಿಆರ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಕೆಲ ಆರೋಪಿಗಳ ಗುರುತು ಪತ್ತೆಯಾಗಿದೆ. ಆದರೆ, ಖಚಿತ ಪಟ್ಟಿಲ್ಲ.

ಲಕ್ಷ್ಮಣನ ವಿರುದ್ಧ ಹಗೆ ಸಾಧಿಸುತ್ತಿದ್ದ ರೌಡಿ ಬಣಗಳು, ರಿಯಲ್‌ ಎಸ್ಟೇಟ್‌ ವ್ಯವಹಾರದ ವೈಷಮ್ಯ ಸೇರಿ ಹಲವು ವಿಚಾರಗಳನ್ನು ಪರಿಶೀಲಿಸಲಾಗಿದೆ. ಆತನ ಸಹಚರರು, ಕುಟುಂಬದ ಕೆಲವರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next