Advertisement

ಕಲಬುರಗಿ:ಬೆಳ್ಳಂಬೆಳಗ್ಗೆ ಪೊಲೀಸರಿಂದ ರೌಡಿ ಶೀಟರ್‌ ಕರಿಚಿರತೆ ಫಿನಿಷ್‌

08:50 AM Aug 01, 2017 | |

 ಕಲಬುರಗಿ : ನಗರದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ ಕೇಳಿ ಬಂದಿದ್ದು, ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ರೌಡಿ ಶೀಟರ್‌ ಮಲ್ಲಿಕಾರ್ಜುನ ಅಲಿಯಾಸ್‌ ಕರಿಚಿರತೆಯನ್ನು ಗುಂಡಿಟ್ಟು ಹತ್ಯೆಗೈಯಲಾಗಿದೆ. 

Advertisement

ಲಕ್ಷ್ಮೀಕಾಂತ್‌ ಕೊಲೆ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ 19 ವರ್ಷದ ಮಲ್ಲಿಕಾರ್ಜುನ ಅಡಗಿರುವ ಖಚಿತ ಮಾಹಿತಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇನ್ಸ್‌ಪೆಕ್ಟರ್‌ ಅವರು ಹಾರಿಸಿದ ಗುಂಡು ತಗುಲಿ ಮಲ್ಲಿಕಾರ್ಜುನ್‌ ಸ್ಥಳದಲ್ಲೇ ಕುಸಿದಿದ್ದಾನೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಸಾವನ್ನಪ್ಪಿದ್ದ. 

ಮಲ್ಲಿಕಾರ್ಜುನ್‌ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮಲ್ಲಿಕಾರ್ಜುನ್‌ ಕಲಬುರಗಿ ತಾಲೂಕಿನ ನಂದೂರು ನಿವಾಸಿಯಾಗಿದ್ದ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next