Advertisement

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

11:03 AM Apr 24, 2024 | Team Udayavani |

ಬೆಂಗಳೂರು: ಕೊಲೆ, ಸುಲಿಗೆ ಹಾಗೂ ಹಫ್ತಾ ವಸೂಲಿ ಸೇರಿ 17 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 4 ವರ್ಷ ಗಳಿಂದ ತಲೆಮರೆಸಿ ಕೊಂಡಿದ್ದ ರೌಡಿಶೀಟರ್‌ನನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಸೈಯದ್‌ ಮಾಜಾರ್‌ ಅಲಿಯಾಸ್‌ ಬಚ್ಚಾ ಮಜಾರ್‌(30) ಎಂಬಾತನನ್ನು ಬಂಧಿಸಲಾಗಿದೆ.

ಏ.19ರಂದು ಠಾಣೆ ವ್ಯಾಪ್ತಿಯ ಕಾಳಿಯಮ್ಮ ದೇವಸ್ಥಾನದ ಬಳಿ ಬೈಕ್‌ನಲ್ಲಿ ಮಾರಕಾಸ್ತ್ರ ಸಮೇತ ಬಂದು ತಾನೂ ರೌಡಿ, ತನಗೆ ಹಫ್ತಾ ಕೊಡಬೇಕಂದು ಗಲಾಟೆ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ಶಿವಾಜಿನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ದ್ದಾರೆ. ಬಳಿಕ ಬಗ್ಗೆ ವಿಚಾರಣೆ ನಡೆಸಿದಾಗ ಆರೋಪಿಯ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ  ಕೊಲೆ, ಕೊಲೆ ಯತ್ನ, ಕೊಲೆ ಬೆದರಿಕೆ, ದರೋಡೆಗೆ, ಗಲಭೆ ಸೇರಿ 17 ಅಪರಾಧ ಪ್ರಕರಣ ಗಳಲ್ಲಿ ಭಾಗಿಯಾಗಿದ್ದು, ಸುಮಾರು 4 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ. ಹೀಗಾಗಿ ಈತನ ವಿರುದ್ಧ ಕೋರ್ಟ್‌ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next