Advertisement

ಚಳಿ ಕಾಯಿಸಲು ರೈಲಲ್ಲಿ ಬೆಂಕಿ ಹಚ್ಚಿದ ಇಬ್ಬರು ವ್ಯಕ್ತಿಗಳ ಬಂಧಿಸಿದ RPF

12:26 AM Jan 07, 2024 | Team Udayavani |

ಅಲಿಘಡ: ಚಳಿಯಿಂದ ರಕ್ಷಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಹಚ್ಚಿ, ಚಳಿ ಕಾಯಿಸಿಕೊಳ್ಳುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಬಂಧಿಸಿದ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡೆದಿದೆ. ಹೊಸದಿಲ್ಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಸೂಪರ್‌ ಫಾಸ್ಟ್‌ ರೈಲಿನಲ್ಲಿ ಜ.3ರ ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಅವಘಡ ಸಂಭವಿಸಿಲ್ಲ. ಅಸ್ಸಾಂನಿಂದ ಆಗಮಿಸಿದ ರೈಲು ಅಲಿಘಡ ಕಡೆಗೆ ಚಲಿಸುತ್ತಿತ್ತು.

Advertisement

ಈ ವೇಳೆ ಚಳಿಯಿಂದ ರಕ್ಷಿಸಿಕೊಳ್ಳಲು ಜನರಲ್‌ ಕಂಪಾರ್ಟ್‌ಮೆಂಟ್‌ನಲ್ಲಿ ಕೆಲವರು ಬೆರಣಿಗೆ ಬೆಂಕಿ ಹಚ್ಚಿ, ಚಳಿ ಕಾಯಿಸಿಕೊಂಡಿದ್ದಾರೆ. ರೈಲಿನಿಂದ ಬೆಂಕಿ ಮತ್ತು ಹೊಗೆ ಬರುತ್ತಿದ್ದನ್ನು ಕಂಡ ಬರ್ಹಾನ್‌ ರೈಲ್ವೆ ನಿಲ್ದಾಣ ಸಮೀಪದ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಮನ್‌ವೊಬ್ಬರು ಆರ್‌ಪಿಎಫ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಆರ್‌ಪಿಎಫ್ ಸಿಬ್ಬಂದಿ, ಮುಂದಿನ ನಿಲ್ದಾಣದಲ್ಲಿ ರೈಲು ನಿಲ್ಲಿಸಿ, ಬೆಂಕಿಯನ್ನು ನಂದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next