Advertisement

ACB ದಾಳಿ; ತೆಲಂಗಾಣ ಕಂದಾಯ ಇಲಾಖೆ ಅಧಿಕಾರಿ ಮನೆಯಲ್ಲಿ ಸಿಕ್ತು…ಒಂದು ಕೋಟಿ ರೂ.ನಗದು!

01:49 PM Aug 15, 2020 | Nagendra Trasi |

ಹೈದರಾಬಾದ್:ರಾಜ್ಯದ ಮೆದ್ ಚಾಲ್ -ಮಲ್ಕಾಜ್ ಗಿರಿ ಜಿಲ್ಲೆಯ ಸ್ಥಳೀಯ ಕಂದಾಯ ಅಧಿಕಾರಿ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 1.1 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Advertisement

ಪಟ್ಟಣದ ಎಎಸ್ ರಾವ್ ನಗರದ ಬಾಡಿಗೆ ಮನೆಯಲ್ಲಿ ಲಂಚ ಪಡೆಯುತ್ತಿದ್ದಾಗ ಕಂದಾಯ ಅಧಿಕಾರಿ ಎರ್ವಾ ಬಾಲರಾಜು ನಾಗರಾಜು ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿರುವುದಾಗಿ ವರದಿ ತಿಳಿಸಿದೆ.

ಈ ದಾಳಿಯಲ್ಲಿ ಗ್ರಾಮಾಧಿಕಾರಿ ಮತ್ತು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟರುಗಳನ್ನು ಬಂಧಿಸಲಾಗಿದೆ. ಬಂಧಿತರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳಲ್ಲಿ, ಭ್ರಷ್ಟಾಚಾರ (ಎಸಿಬಿ) ನಿಗ್ರಹ ದಳದ ಅಧಿಕಾರಿಗಳಲ್ಲಿ ಕೆಲವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಫೇಸ್ ಮಾಸ್ಕ್ ಹಾಕಿಕೊಂಡು ಸೋಫಾದಲ್ಲಿ ಕುಳಿತು ನೋಟುಗಳ ಹಲವಾರು ಬಂಡಲ್ ಗಳಲ್ಲಿರುವ ಹಣವನ್ನು ಎಣಿಸುತ್ತಿರುವುದು ವರದಿಯಾಗಿದೆ.

Advertisement

100 ರೂಪಾಯಿ ಹಾಗೂ 500 ರೂಪಾಯಿ ನೋಟುಗಳ ಕಂತೆ ಇದಾಗಿದೆ ಎಂದು ವರದಿ ವಿವರಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ತನ್ನ ಕಾರ್ಯವ್ಯಾಪ್ತಿಯಲ್ಲಿ ಬರುವ 28 ಎಕರೆ ಜಾಗದ ವಿವಾದವನ್ನು ಬಗೆಹರಿಸಿಕೊಡಲು ನಾಗರಾಜು ಎರಡು ಕೋಟಿ ರೂಪಾಯಿ ಲಂಚ ಕೇಳಿರುವುದಾಗಿ ಆರೋಪಿಸಿದ್ದಾರೆ.

ಮನೆಯ ಮೇಲೆ ದಾಳಿ ನಡೆಸಿದಾಗ 1.1 ಕೋಟಿ ರೂಪಾಯಿ ನಗದು ಹೊರತುಪಡಿಸಿ, ಚಿನ್ನ ಮತ್ತು 28 ಲಕ್ಷ ರೂಪಾಯಿ ಹೆಚ್ಚುವರಿ ನಗದು ಪತ್ತೆಯಾಗಿದ್ದು, ಹಲವಾರು ಜಾಗಗಳ ದಾಖಲೆಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ರಾಜ್ಯ ಕಂದಾಯ ಇಲಾಖೆಯಲ್ಲಿ ನೂರಾರು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವುದಾಗಿ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next