Advertisement

ಬರ ತಾಲೂಕುಗಳಿಗೆ ತಲಾ 1 ಕೋಟಿ ಬಿಡುಗಡೆ

09:38 AM Apr 24, 2019 | Team Udayavani |

ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಬರ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ 162 ಕೋಟಿ ರೂ.ಬಿಡುಗಡೆ ಮಾಡಿದೆ. ಮಾರ್ಚ್‌ 18 ರಂದೇ ರಾಜ್ಯ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮದಂತೆ ಹಣ ಬಿಡುಗಡೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

Advertisement

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 162 ತಾಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಪ್ರತಿ ತಾಲೂಕಿಗೂ ತಲಾ ಒಂದು ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ನೀರು ಮತ್ತು ಮೇವು ಖರೀದಿ, ಜಾನುವಾರುಗಳ ಸಂರಕ್ಷಣೆಗೆ ಹಣ ವೆಚ್ಚ ಮಾಡಲು ಸೂಚಿಸಲಾಗಿದೆ.

ಯಾವ ಉದ್ದೇಶಕ್ಕೆ ಹಣ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಹಣ ಬಳಸುವಂತೆ ಆದೇಶದಲ್ಲಿ ಸೂಚಿಸಲಾಗಿದ್ದು, ಬೇರೆ ಉದ್ದೇಶಗಳಿಗೆ ಹಣ ಬಳಕೆ ಮಾಡಿದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಯನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next