Advertisement

26 ನವೋದ್ಯಮಿಗಳಿಗೆ 10 ಕೋಟಿ ಅನುದಾನ: ಪ್ರಿಯಾಂಕ್‌ ಖರ್ಗೆ

11:06 AM May 11, 2017 | Team Udayavani |

ಬೆಂಗಳೂರು: ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಅವಿಷ್ಕಾರಕ್ಕಾಗಿ ಒಟ್ಟು 26 ನವೋದ್ಯಮಗಳಿಗೆ ರಾಜ್ಯ ಸರ್ಕಾರ 10.70 ಕೋಟಿ ರೂ. ಅನುದಾನ ಬಿಡುಗಡೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Advertisement

ರಾಜ್ಯದ ನೂತನ ಸ್ಟಾರ್ಟ್‌ಅಪ್‌ (ನವೋದ್ಯಮ) ನೀತಿ-2015-10 ಅನ್ವಯ “ಐಡಿಯಾ ಟು ಪ್ರೂಫ್ ಆಫ್ ಕಾನ್ಸೆಪ್ಟ್ ಗ್ರಾಂಟ್‌ ಸ್ಕೀಮ್‌’ (ಐಡಿಯಾ2ಪಿಓಸಿ) ಪ್ರಕಾರ 26 ನವೋದ್ಯಮಗಳಿಗೆ ಅನುದಾನ ಬಿಡಗಡೆ ಮಾಡಲಾಗಿದೆ. ವಿವಿಧ ನವೋದ್ಯಮಗಳು 29 ರಿಂದ 40 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಪಡೆದುಕೊಂಡಿವೆ. ಆಯ್ಕೆಯಾದ ನವೋದ್ಯಮಗಳಿಗೆ ಸಚಿವರು ಬುಧವಾರ ಮೊದಲ ಕಂತಿನ 3.21 ಕೋಟಿ ರೂ. ಮೊತ್ತದ ಚೆಕ್‌ ಹಸ್ತಾಂತರಿಸಿದರು.

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್‌ ವಿತರಿಸಿ ಮಾತನಾಡಿದ ಸಚಿವರು, ನವೋದ್ಯಮಕ್ಕೆ ರಾಜ್ಯದಲ್ಲಿ ಸಾಕಷ್ಟು ಅವಕಾಶಗಳಿದ್ದು, ಸರ್ಕಾರ ಅದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ನವೋದ್ಯಮ ಘಟಕ, ಕರ್ನಾಟಕ ಜೈವಿಕ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸೇವೆ (ಕೆಬಿಐಟಿಎಸ್‌) ಸಹಯೋಗದೊಂದಿಗೆ ಐಟಿ-ಬಿಟಿ ಇಲಾಖೆ ಐಡಿಯಾ2ಪಿಓಸಿ ಯೋಜನೆ ಜಾರಿಗೆ ತರುತ್ತಿದೆ ಎಂದರು.

ಜೈವಿಕ ತಂತ್ರಜ್ಞಾನ ಕ್ಷೇತ್ರದ ಅವಿಷ್ಕಾರಗಳನ್ನು ಪ್ರೋತ್ಸಾಹಿಸಿ ಮತ್ತು ನವೋದ್ಯಮಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಅಗತ್ಯ ಮಾರ್ಗದರ್ಶನ ನೀಡಲು ಅನುಕೂಲವಾಗುವಂತೆ ಐಡಿಯಾ2ಪಿಓಸಿ ಯೋಜನೆ ರೂಪಿಸಲಾಗಿದೆ. ಈಗಾಗಲೇ 26 ನವೋದ್ಯಮಗಳನ್ನು ಆಯ್ಕೆ ಮಾಡಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವರು ನವ ಉದ್ದಿಮೆದಾರರಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ   ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next