Advertisement
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರದ ಗ್ರಾಮೀಣಾಭಿವೃದ್ಧಿ ಖಾತೆಯ ಮಾಜಿ ಸಹಾಯಕ ಸಚಿವ ಪ್ರದೀಪ್ ಜೈನ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರಕಾರವು ಸೆಂಟ್ರಲ್ ಎಕ್ಸೈಸ್ ಡ್ನೂಟಿ 12 ಬಾರಿ ಹೆಚ್ಚಳ ಮಾಡಿದೆ. ಅದರೊಂದಿಗೆ ನೋಟು ಅಮಾನ್ಯಗೊಳಿಸುವ ಮೂಲಕ ಜನಸಾಮಾನ್ಯರ ಹಣವನ್ನು ಲೂಟಿ ಹೊಡೆದಿದ್ದು, ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಆರಂಭದಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ಅದನ್ನು ಕಸ ಎಂಬುದಾಗಿ ಪ್ರತಿಕ್ರಿಯಿಸಿದರು. ಇದಾಗಿ 24 ಗಂಟೆಗಳ ಬಳಿಕ ಕಾಂಗ್ರೆಸ್ ಪ್ರಣಾಳಿಕೆಗೆ ಕೇಂದ್ರ ಯೋಜನೆಗಳ ನಕಲು ಎಂದು ಹೇಳಿದರು. ಹಾಗಿದ್ದರೆ ಕೇಂದ್ರದ ಯೋಜನೆಗಳು ಕಸವೇ ಎಂಬುದು ನನ್ನ ಪ್ರಶ್ನೆ ಎಂದು ಕೇಂದ್ರದ ನಗರಾಭಿವೃದ್ಧಿ ಖಾತೆಯ ಮಾಜಿ ಸಹಾಯಕ ಸಚಿವೆ ದೀಪಾ ದಾಸಮುನ್ಶಿ ಪ್ರಶ್ನಿಸಿದರು.
Related Articles
Advertisement