Advertisement

‘RSS ಕ್ಯಾನ್ಸರ್​ ಇದ್ದಂತೆ’ ಎಂದ ಜಾವೇದ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ  

03:20 PM Sep 23, 2021 | Team Udayavani |

ಮುಂಬೈ : ಆರ್‍ಎಸ್‍ಎಸ್‍ ವಿರುದ್ಧ ಹೇಳಿಕೆ ನೀಡಿದ ಆರೋಪದಲ್ಲಿ ಬಾಲಿವುಡ್ ಗೀತ ರಚನಾಕಾರ ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ವಕೀಲ​ ಸಂತೋಷ್​ ದುಬೆ ಎಂಬುವವರು ಜಾವೇದ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

Advertisement

ವಕೀಲರೂ ಆಗಿರುವ ಮತ್ತೋರ್ವ ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ಅಖ್ತರ್ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್‌ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next