Advertisement

ಶಾಸಕರ ಕ್ಷೇತ್ರಾಭಿವೃದ್ಧಿಗೆ ತಲಾ ಎರಡು ಕೋಟಿ ರೂ.ಅನುದಾನ

10:34 PM Jun 22, 2019 | Lakshmi GovindaRaj |

ಬೆಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಕ್ಷೇತ್ರದ ಅಭಿವೃದ್ಧಿಗೆ ತಲಾ ಎರಡು ಕೋಟಿ ರೂ.ನೀಡುವ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಜೂ.13ರಂದು ಪತ್ರ ಬರೆದಿರುವ ಅವರು, ಜೂನ್‌ ಅಂತ್ಯದೊಳಗೆ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ತಿಳಿಸಿದ್ದಾರೆ.

Advertisement

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ ಎರಡು ಕೋಟಿ ರೂ.ವರೆಗೆ ಅನುದಾನ ದೊರೆಯಲಿದೆಯಾದರೂ 2018-19 ಹಾಗೂ 2019-20ನೇ ಸಾಲಿಗೆ ಬಹುತೇಕ ಶಾಸಕರು ಪ್ರಸ್ತಾವನೆ ಸಲ್ಲಿಸಿಲ್ಲ. 31 ಶಾಸಕರು, 36 ವಿಧಾನ ಪರಿಷತ್‌ ಸದಸ್ಯರು ಮಾತ್ರ ಪ್ರಸ್ತಾವನೆ ಸಲ್ಲಿಸಿದ್ದರು. ಕೆಲವು ಶಾಸಕರು ಎರಡು ಕೋಟಿ ರೂ.ಗಳಿಗೆ ಪೂರ್ಣವಾಗಿ ಪ್ರಸ್ತಾವನೆ ಸಲ್ಲಿಸಿಲ್ಲ. ಹೀಗಾಗಿ, ಖುದ್ದು ಮುಖ್ಯಮಂತ್ರಿಯವರು ಪತ್ರ ಬರೆದು ಜೂನ್‌ ಅಂತ್ಯದೊಳಗೆ ಕ್ರಿಯಾ ಯೋಜನೆ ಸಲ್ಲಿಸಿ ಅನುಮೋದನೆ ಪಡೆಯುವಂತೆ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next