Advertisement

ಪರಿಹಾರ ನಿಧಿಗೆ ವಿಜಯ ಬ್ಯಾಂಕ್‌ನಿಂದ 2 ಕೋಟಿ ರೂ.

12:38 PM Aug 27, 2018 | Team Udayavani |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿಜಯ ಬ್ಯಾಂಕ್‌ ಕೊಡಗಿನ ನೆರೆ ಹಾವಳಿ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 2.0 ಕೋಟಿ ರೂ.ಗಳನ್ನು ನೀಡಿದೆ. ಬ್ಯಾಂಕಿನ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ಅಡಿ ಶನಿವಾರ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆರ್‌.ಎ.ಶಂಕರನಾರಾಯಣನ್‌ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಚೆಕ್‌ ಹಸ್ತಾಂತರಿಸಿದರು.

Advertisement

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕರಾದ ವೈ.ನಾಗೇಶ್ವರ ರಾವ್‌, ಮುರಳಿ ರಾಮಸ್ವಾಮಿ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next