Advertisement

ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ಸಹಾಯಧನ : ಪ್ರಮೋದ್ ಸಾವಂತ್

06:12 PM Aug 13, 2021 | Team Udayavani |

ಪಣಜಿ : ಕೋವಿಡ್‍ನಿಂದ ಮೃತಪಟ್ಟ 125 ನಾಗರೀಕರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಸಹಾಯಧನ ವಿತರಿಸಲಾಗುವುದು ಎಂದು ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

Advertisement

ಇದನ್ನೂ ಓದಿ : ನಾಡು ಕಂಡ ಧೀಮಂತ ನಾಯಕ ಸಿದ್ದರಾಮಯ್ಯ : ಮಾಜಿ ಶಾಸಕ ಕೆ ವೆಂಕಟೇಶ್ ಬಣ್ಣನೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‍ನಿಂದ ಮೃತ ಕುಟುಂಬಗಳಿಗೆ ಅಗತ್ಯ ಮಾಹಿತಿ ಲಭಿಸಿಲ್ಲವಾದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬೇಕು, ಅವರಿಗೆ ಸಹಾಯ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದುವರೆಗೂ ಕೋವಿಡ್‍ನಿಂದ ಮೃತರ 125 ಅರ್ಜಿಗಳು ಮಾತ್ರ ಬಂದಿದೆ. ಕೋವಿಡ್‍ ನಿಂದ ಮೃತಪಟ್ಟ ಕುಟುಂಬಸ್ಥರ ಅಗತ್ಯ ಮಾಹಿತಿ ಲಭ್ಯವಿಲ್ಲದಿದ್ದವರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ಮಾಹಿತಿ ಸಮಾಜ ಕಲ್ಯಾಣ ಇಲಾಖೆಯ ಬಳಿ ಲಭ್ಯವಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ನಡುಗಡ್ಡೆ ಸೇತುವೆಗಳಿಗೆಮುಕ್ತಿ ಎಂದು? ಕುಂಟುತ್ತ ಸಾಗಿವೆ ಕಾಮಗಾರಿಗಳು

Advertisement
Advertisement

Udayavani is now on Telegram. Click here to join our channel and stay updated with the latest news.

Next