Advertisement

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

11:32 PM Jun 30, 2024 | Team Udayavani |

ಬೆಂಗಳೂರು: ಸಿಎಂ-ಡಿಸಿಎಂ ನೇತೃತ್ವದಲ್ಲಿಯ ದಿಲ್ಲಿ ಪ್ರವಾಸ ಯಶಸ್ವಿಯಾಗಿದೆ. ನಿರ್ಭಯಾ ಯೋಜನೆಯಡಿ ಪ್ರತೀ ಪಟ್ಟಣಕ್ಕೆ ತಲಾ 200 ಕೋಟಿ ರೂ. ಕೊಡಲು ಮನವಿ ಮಾಡಲಾಗಿದೆ.

Advertisement

ಇದಕ್ಕೆ ಕೇಂದ್ರದಿಂದ ಪೂರಕ ಸ್ಪಂದನೆ ದೊರಕಿದೆ ಎಂದು ಗೃಹ ಸಚಿವ ಡಾ |ಜಿ. ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು. ಪೊಲೀಸ್‌ ಇಲಾಖೆಯ ಕೆಲವು ಪ್ರಸ್ತಾವನೆಗಳನ್ನು ಕೇಂದ್ರದ ಮುಂದಿಟ್ಟಿದ್ದೇವೆ. ಆಧುನಿಕ ಬಾಡಿ ಕೆಮರಾಗಳನ್ನು ಪೊಲೀಸರಿಗೆ ವಿತರಿಸಲು ಅನುದಾನ ಕೇಳಲಾಗಿದೆ. ಮುಂಬರುವ ದಿನಗಳಲ್ಲಿ ಅನುದಾನ ದೊರೆಯುವ ನಿರೀಕ್ಷೆ ಇದೆ ಎಂದರು.

ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ ಹೆದ್ದಾರಿ ಯೋಜನೆಗಳನ್ನು ಬೇಗ ಬೇಗ ಮುಗಿಸಿಕೊಡುವಂತೆ ಮನವಿ ಮಾಡಲಾಯಿತು. ರಾಜ್ಯಕ್ಕೆ ಒಂದು ಲಕ್ಷ ಕೋಟಿ ರೂ. ಕೊಡುವುದಾಗಿ ಭರವಸೆ ನೀಡಿದರು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next