Advertisement

ದೇವಾಲಯಗಳ ಅಭಿವೃದ್ಧಿಗೆ 291.87 ಕೋಟಿ ರೂ.: ಶ್ರೀನಿವಾಸ ಪೂಜಾರಿ

10:13 AM Mar 17, 2020 | Sriram |

ವಿಧಾನಸಭೆ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮುಜರಾಯಿ ಮತ್ತು ಆರಾಧನಾ ದೇವಸ್ಥಾನಗಳ ಅಭಿವೃದ್ಧಿಗೆ 291.87 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಜಕುಮಾರ್‌ ಪಾಟೀಲ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಂದು ಕೋಟಿ ರೂ.ವರೆಗಿನ ಪ್ರಸ್ತಾವನೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲೇ ಅನುಮತಿ ದೊರೆಯಲಿದೆ. ಆದಕ್ಕಿಂತ ಹೆಚ್ಚಿನ ಮೊತ್ತ ಇದ್ದರೆ ಮಾತ್ರ ಆಯುಕ್ತರ ಹಂತಕ್ಕೆ ಬರಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ರಾಜಕುಮಾರ್‌ ಪಾಟೀಲ್‌, ಕೋಟ್ಯಂತರ ರೂ. ಮುಜರಾಯಿ ಇಲಾಖೆಯಲ್ಲಿ ಇದ್ದರೂ ದೇವಾಲಯಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು.

ಕ್ರಮ
ಬಿಜೆಪಿಯ ಲಾಲಾಜಿ ಆರ್‌. ಮೆಂಡನ್‌ ಅವರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸಪೂಜಾರಿ, ಮೀನುಗಾರಿಕೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಮತ್ಸಾéಶ್ರಯ ವಸತಿ ಯೋಜನೆ 2017-18 ನೇ ಸಾಲಿನಿಂದ ರಾಜೀವ್‌ ಗಾಂಧಿ ವಸತಿ ನಿಗದಮ ಮೂಲಕ ಅನುಷ್ಟಾನ ಮಾಡಲಾಗುತ್ತಿದ್ದು ಕೆಲವೊಂದು ತಾಂತ್ರಿಕ ಕಾರಣಳಿಂದ ಅನುಷ್ಟಾನದಲ್ಲಿ ವಿಳಂಬವಾಗಿರುತ್ತದೆ. ಹೀಗಾಗಿ, ಯೋಜನೆಯನ್ನು ರಾಜೀವ್‌ಗಾಂಧಿ ವಸತಿ ನಿಗಮದಿಂದ ವಾಪಸ್‌ ಪಡೆದು ಹಿಂದೆ ಇದ್ದಂತೆ ಕರ್ನಾಟಕ ಮೀನುಗಾರಿಕೆ ಅಭವೃದ್ಧಿ ನಿಗಮಕ್ಕೆ ವಹಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next