Advertisement

ಕೆರೆ ತುಂಬಿಸುವ ಯೋಜನೆಗೆ 3,000 ಕೋಟಿ ರೂ.

12:30 AM Jan 29, 2019 | Team Udayavani |

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಕೆರೆಗಳನ್ನು ತುಂಬಿಸುವ ಉದ್ದೇಶಕ್ಕೆ ಈ ಬಾರಿಯ ಬಜೆಟ್‌ನಲ್ಲಿ 3,000 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೆರೆಗಳನ್ನು ಅಭಿವೃದ್ಧಿಪಡಿಸಿ, ನದಿ ಮೂಲದಿಂದ ನೀರು ತುಂಬಿಸಲು ಅಗತ್ಯವಾದ ಕಾಲುವೆ ಜಾಲ ಬಲಪಡಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 3,000 ಕೋಟಿ ರೂ. ಒದಗಿಸಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದು ಹೇಳಿದರು. ಎತ್ತಿನಹೊಳೆ ಯೋಜನೆ ಪ್ರಗತಿಯಲ್ಲಿದ್ದು, ಈ ಯೋಜನೆಯಡಿ 496 ಕೆರೆಗಳ ಅಭಿವೃದ್ಧಿಗೆ 647 ಕೋಟಿ ರೂ. ವೆಚ್ಚವನ್ನು ಅಂದಾಜು ಮಾಡಲಾಗಿದೆ. ಇದಕ್ಕೂ ಬಜೆಟ್‌ನಲ್ಲಿ 500 ಕೋಟಿ ರೂ. ಒದಗಿಸಲಾಗುವುದು ಎಂದರು. ‘ಕೆಂಗೇರಿ ಬಳಿ ವೃಷಭಾವತಿ ಕಣಿವೆಯ ನೀರು ಶುದ್ಧೀಕರಣಗೊಳಿಸಿ ಏತ ನೀರಾವರಿ ಯೋಜನೆ ಮೂಲಕ ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳ ಕೆರೆಗಳನ್ನು ತುಂಬಿಸಲು 800 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next